<p><strong>ಹೊಸಪೇಟೆ (ವಿಜಯನಗರ):</strong> ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಲಾಯಿತು.</p><p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ತಹಶೀಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಹಾಗೂ ಸಚಿವ ಪ್ರಿಯಾಂಕ್ ವಿರುದ್ಧ ಘೋಷಣೆ ಕೂಗಿದರು. ಪ್ರಿಯಾಂಕ್ ಖರ್ಗೆ ಅವರ ಬಾಯಿ ಬಂದ್ ಮಾಡಿಸುವುದನ್ನು ಸಂಕೇತಿಸುವ ರೀತಿಯಲ್ಲಿ ಸಿದ್ಧಪಡಿಸಲಾದ ಭಿತ್ತಿ ಫಲಕಗಳನ್ನು ಹಿಡಿದಿದ್ದ ಕಾರ್ಯಕರ್ತರು, ಸಚಿವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.</p><p>ಚನ್ನಬಸವನಗೌಡ ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರ ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡಿದೆ. ಈ ಮೂಲಕ ಸಾಮಾನ್ಯ ಜನರಿಗೆ ಭಾರಿ ಹೊರೆ ಹಾಕಿದೆ. ಪ್ರಿಯಾಂಕ್ ಖರ್ಗೆ ಚೇಲಾಗಳಿಂದಲೇ ತನಗೆ ತೊಂದರೆ ಆಗಿದೆ ಎಂದು ಹೇಳಿ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಷ್ಪಕ್ಷಪಾತ ತನಿಖೆ ಆಗಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಅನಿವಾರ್ಯ, ಜತೆಗೆ ಸಚಿನ್ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಸರ್ಕಾರ ನೀಡಬೇಕು ಎಂದರು.</p><p>ಸರ್ಕಾರ ಮತ್ತೊಂದೆಡೆ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿ ಜನರಿಗೆ ಮೋಸ ಮಾಡಿದೆ. ಗ್ಯಾರಂಟಿ ಹೆಸರಲ್ಲಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಅದರ ಎರಡು ಪಟ್ಟು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಹಲವು ಹಗರಣಗಳಿಂದಾಗಿ ಜನರೇ ಸರ್ಕಾರವನ್ನು ಕಿತ್ತೊಗೆಯುವ ದಿನ ಸಮೀಪಿಸಲಿದೆ ಎಂದರು.</p><p>ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮಾತನಾಡಿ, ಹಲವು ಹಗರಣಗಳಲ್ಲಿ ಮುಳುಗಿರುವ ರಾಜ್ಯ ಸರ್ಕಾರ ತನ್ನ ಕೈಯಾರೆ ಹೊಸ ಕಳಂಕ ತಂದುಕೊಳ್ಳುತ್ತಿದೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿದರೆ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯ ಎಂದರು.</p><p>ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ರಾಜಣ್ಣ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಸ್. ರಾಘವೇಂದ್ರ, ಸಂಜೀವ ರೆಡ್ಡಿ, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಅರುಂಡಿ ಸುವರ್ಣಮ್ಮ, ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್, ಮುಖಂಡರಾದ ಅಶೋಕ್ ಜೀರೆ, ಸಾಲಿ ಸಿದ್ದಯ್ಯ ಸ್ವಾಮಿ, ರೇವಣಸಿದ್ದಪ್ಪ, ಶಂಕರ್ ಮೇಟಿ, ಜಗದೀಶ್ ಕಮಟಗಿ, ಈ.ಟಿ.ಲಿಂಗರಾಜ್ ಇತರರು ಇದ್ದರು.</p>.ನಾವು ಬೀದಿಗೆ ಇಳಿದರೆ ಬಿಜೆಪಿಯವರು ಮನೆ ಸೇರಬೇಕಾಗುತ್ತದೆ: ಸಚಿವ ಪ್ರಿಯಾಂಕ್.ಪ್ರಿಯಾಂಕ್ ಮನೆಗೆ ಮುತ್ತಿಗೆ; ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು.ನಾವು ಬೀದಿಗೆ ಇಳಿದರೆ ಬಿಜೆಪಿಯವರು ಮನೆ ಸೇರಬೇಕಾಗುತ್ತದೆ: ಸಚಿವ ಪ್ರಿಯಾಂಕ್.ಸಚಿನ್ ಪಾಂಚಾಳ್ ಆತ್ಮಹತ್ಯೆ: 2ನೇ ದಿನವೂ ಸಿಐಡಿ ಅಧಿಕಾರಿಗಳಿಂದ ತನಿಖೆ, ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಲಾಯಿತು.</p><p>ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ತಹಶೀಲ್ದಾರ್ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಹಾಗೂ ಸಚಿವ ಪ್ರಿಯಾಂಕ್ ವಿರುದ್ಧ ಘೋಷಣೆ ಕೂಗಿದರು. ಪ್ರಿಯಾಂಕ್ ಖರ್ಗೆ ಅವರ ಬಾಯಿ ಬಂದ್ ಮಾಡಿಸುವುದನ್ನು ಸಂಕೇತಿಸುವ ರೀತಿಯಲ್ಲಿ ಸಿದ್ಧಪಡಿಸಲಾದ ಭಿತ್ತಿ ಫಲಕಗಳನ್ನು ಹಿಡಿದಿದ್ದ ಕಾರ್ಯಕರ್ತರು, ಸಚಿವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.</p><p>ಚನ್ನಬಸವನಗೌಡ ಪಾಟೀಲ್ ಮಾತನಾಡಿ, ರಾಜ್ಯ ಸರ್ಕಾರ ಹಗರಣಗಳ ಸರಮಾಲೆಯನ್ನೇ ಕೊರಳಿಗೆ ಹಾಕಿಕೊಂಡಿದೆ. ಈ ಮೂಲಕ ಸಾಮಾನ್ಯ ಜನರಿಗೆ ಭಾರಿ ಹೊರೆ ಹಾಕಿದೆ. ಪ್ರಿಯಾಂಕ್ ಖರ್ಗೆ ಚೇಲಾಗಳಿಂದಲೇ ತನಗೆ ತೊಂದರೆ ಆಗಿದೆ ಎಂದು ಹೇಳಿ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಷ್ಪಕ್ಷಪಾತ ತನಿಖೆ ಆಗಬೇಕಿದ್ದರೆ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆ ಅನಿವಾರ್ಯ, ಜತೆಗೆ ಸಚಿನ್ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಸರ್ಕಾರ ನೀಡಬೇಕು ಎಂದರು.</p><p>ಸರ್ಕಾರ ಮತ್ತೊಂದೆಡೆ ಬಸ್ ಪ್ರಯಾಣ ದರವನ್ನೂ ಹೆಚ್ಚಿಸಿ ಜನರಿಗೆ ಮೋಸ ಮಾಡಿದೆ. ಗ್ಯಾರಂಟಿ ಹೆಸರಲ್ಲಿ ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಲ್ಲಿ ಅದರ ಎರಡು ಪಟ್ಟು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಹಲವು ಹಗರಣಗಳಿಂದಾಗಿ ಜನರೇ ಸರ್ಕಾರವನ್ನು ಕಿತ್ತೊಗೆಯುವ ದಿನ ಸಮೀಪಿಸಲಿದೆ ಎಂದರು.</p><p>ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಮಾತನಾಡಿ, ಹಲವು ಹಗರಣಗಳಲ್ಲಿ ಮುಳುಗಿರುವ ರಾಜ್ಯ ಸರ್ಕಾರ ತನ್ನ ಕೈಯಾರೆ ಹೊಸ ಕಳಂಕ ತಂದುಕೊಳ್ಳುತ್ತಿದೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಿದರೆ ಮಾತ್ರ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯ ಎಂದರು.</p><p>ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಅಯ್ಯಾಳಿ ತಿಮ್ಮಪ್ಪ, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ರಾಜಣ್ಣ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಸ್. ರಾಘವೇಂದ್ರ, ಸಂಜೀವ ರೆಡ್ಡಿ, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಅರುಂಡಿ ಸುವರ್ಣಮ್ಮ, ಯುವ ಮೋರ್ಚಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್, ಮುಖಂಡರಾದ ಅಶೋಕ್ ಜೀರೆ, ಸಾಲಿ ಸಿದ್ದಯ್ಯ ಸ್ವಾಮಿ, ರೇವಣಸಿದ್ದಪ್ಪ, ಶಂಕರ್ ಮೇಟಿ, ಜಗದೀಶ್ ಕಮಟಗಿ, ಈ.ಟಿ.ಲಿಂಗರಾಜ್ ಇತರರು ಇದ್ದರು.</p>.ನಾವು ಬೀದಿಗೆ ಇಳಿದರೆ ಬಿಜೆಪಿಯವರು ಮನೆ ಸೇರಬೇಕಾಗುತ್ತದೆ: ಸಚಿವ ಪ್ರಿಯಾಂಕ್.ಪ್ರಿಯಾಂಕ್ ಮನೆಗೆ ಮುತ್ತಿಗೆ; ಕೈ ಕಾರ್ಯಕರ್ತರಿಂದ ಬಿಜೆಪಿಗರಿಗೆ ಮಜ್ಜಿಗೆ, ಎಳನೀರು.ನಾವು ಬೀದಿಗೆ ಇಳಿದರೆ ಬಿಜೆಪಿಯವರು ಮನೆ ಸೇರಬೇಕಾಗುತ್ತದೆ: ಸಚಿವ ಪ್ರಿಯಾಂಕ್.ಸಚಿನ್ ಪಾಂಚಾಳ್ ಆತ್ಮಹತ್ಯೆ: 2ನೇ ದಿನವೂ ಸಿಐಡಿ ಅಧಿಕಾರಿಗಳಿಂದ ತನಿಖೆ, ವಿಚಾರಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>