ಅರಸೀಕೆರೆ (ವಿಜಯನಗರ ಜಿಲ್ಲೆ): ‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಹೊಸ ಮದ್ಯದ ಅಂಗಡಿ ತೆರೆಯಲು ಪರವಾನಗಿ ನೀಡಬಾರದು’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.
ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ಹೋಬಳಿಯ ಕಮ್ಮತ್ತಹಳ್ಳಿ ಗ್ರಾಮದಲ್ಲಿ ಮಂಗಳವಾರ ಬಸವತತ್ವ ಸಮ್ಮೇಳನದಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಾಲೇ ಮದ್ಯದಿಂದ ಸಾವಿರಾರು ಕುಟುಂಬಗಳ ನೆಮ್ಮದಿ ಹಾಳಾಗಿದೆ. ಯುವಕರು ದಾರಿ ತಪ್ಪುತ್ತಿದ್ದಾರೆ. ಸರ್ಕಾರ ಕೂಡಲೇ ಪ್ರಸ್ತಾವ ಕೈಬಿಡಬೇಕು’ ಎಂದರು.
‘ಮದ್ಯದ ಅಂಗಡಿ ವಿರುದ್ಧ ಮಹಿಳೆಯರು ದಂಗೆ ಏಳಬೇಕು. ಸಾತ್ವಿಕ ಪುರುಷರೂ ಭಾಗಿಯಾಗಬೇಕು. ಸಮಾಜದಲ್ಲಿ ಪ್ರತಿಯೊಬ್ಬರೂ ಅನ್ಯಾಯ ವಿರೋಧಿಸುವ ಗುಣ ಬೆಳಸಿಕೊಳ್ಳಬೇಕು. ಇದರಲ್ಲಿ ಮಠಾಧೀಶರೂ ಹೊರತಾಗಿಲ್ಲ. ಆದರೆ, ಮಠದ ಭಕ್ತರನ್ನು ಕಳೆದುಕೊಳ್ಳುವ ಆತಂಕ ಮಠಾಧೀಶರಿಗೆ ಸಲ್ಲದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.