<p><strong>ಹೊಸಪೇಟೆ(ವಿಜಯನಗರ):</strong> ಮ್ಯಾರೇಜ್ ಬೋಕರ್ಗಳ ಸುಲಿಗೆ ತಪ್ಪಿಸುವುದು, ಉತ್ತಮ ಸಂಬಂಧ ಬೆಸೆಯುವುದು, ಪೋಷಕರ ಹಣ, ಸಮಯ ಉಳಿತಾಯಕ್ಕೆ ವಧು- ವರರ ಸಮಾವೇಶ ಸಹಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ನಗರದ ಸವಿತಾ ಸಮಾಜ ಹಾಗೂ ದಾವಣಗೆರೆ ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಜ್ಯ ಮಟ್ಟದ ಸವಿತಾ ಸಮಾಜದ ವಧು–ವರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಸವಿತಾ ಸಮಾಜದ ಯುವಕರು ಸಾಂಪ್ರದಾಯಿಕ ಕುಲವೃತ್ತಿಗೆ ಸೀಮಿತವಾಗಿಲ್ಲ. ಶೈಕ್ಷಣಿಕವಾಗಿ ದಾಪುಗಾಲು ಹಾಕುತ್ತಿದ್ದು, ನಾನಾ ಕ್ಷೇತ್ರಗಳಲ್ಲಿ ಉದ್ಯೋಗ, ವ್ಯಾಪಾರದಲ್ಲಿ ತೊಡಗಿದ್ದಾರೆ. ಆದರೆ, ಮದುವೆ ವಿಚಾರ ಬಂದಾಗ ಇತ್ತೀಚೆಗೆ ಯುವ ಜನರಲ್ಲಿ ಬೇಕು, ಬೇಡಿಕೆಗಳು ಹೆಚ್ಚುತ್ತಿದ್ದು, ಮದುವೆ ವಿಳಂಬಕ್ಕೆ ಕಾರಣವಾಗುತ್ತಿವೆ ಎಂದರು.</p>.<p>ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೆಂಕಟಾಚಲಪತಿ ಪಿ.ಬಿ. ಮಾತನಾಡಿ, ಮದುವೆಗೆ ಉತ್ತಮ ಸಂಗಾತಿ ಹುಡುಕಿಕೊಳ್ಳುವುದು ಅತಿ ಅವಶ್ಯಕ. ಆದರೆ, ಮದುವೆ ಬ್ರೋಕರ್ಗಳು ಇದನ್ನೇ ಬಂಡವಾಳ ಮಾಡಿಕೊಂಡು ಸುಲಿಗೆ ಮಾಡುತ್ತಾರೆ. ಜೊತೆಗೆ ಸುಳ್ಳು ಹೇಳಿ ಸಂಬಂಧ ಕುದುರಿಸುತ್ತಾರೆ. ಇದನ್ನು ತಪ್ಪಿಸಲು ವಧು-ವರರ ಸಮಾವೇಶ ಸಹಕಾರಿಯಾಗಿದೆ. ವೇದಿಕೆಯಿಂದ ಕಳೆದ 9 ವರ್ಷಗಳಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಮದುವೆಗಳು ನಿಶ್ಚಯವಾಗಿವೆ ಎಂದರು.</p>.<p>ನಿವೃತ್ತ ಶಿಕ್ಷಕ ನಾಗೇಶ್, ನಿವೃತ್ತ ಎಎಸ್ಐ ಶ್ರೀನಿವಾಸ, ಮನೋಹರ್ ಕುಮಾರ್, ರಾಮಲಿಂಗಪ್ಪ, ನಾರಾಯಣ ಹಡಪದ, ಎಎಸ್ಐ ಎಂ.ಸುರೇಶ್, ಆರ್.ನಾಗರಾಜ್, ವಿಜಯ ಭಾಸ್ಕರ್ ಇಟಗಿ, ಎನ್.ವೇಣುಗೋಪಾಲ, ಗುರುರಾಜ್, ಡಾ.ರಾಘವೇಂದ್ರ ಗುರ್ಜಾಲ, ಕೃಷ್ಣ ಹಡಪದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ಮ್ಯಾರೇಜ್ ಬೋಕರ್ಗಳ ಸುಲಿಗೆ ತಪ್ಪಿಸುವುದು, ಉತ್ತಮ ಸಂಬಂಧ ಬೆಸೆಯುವುದು, ಪೋಷಕರ ಹಣ, ಸಮಯ ಉಳಿತಾಯಕ್ಕೆ ವಧು- ವರರ ಸಮಾವೇಶ ಸಹಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್ ಅಭಿಪ್ರಾಯಪಟ್ಟರು.</p>.<p>ನಗರದ ಸವಿತಾ ಸಮಾಜ ಹಾಗೂ ದಾವಣಗೆರೆ ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಗರದ ಶ್ರೀವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಜ್ಯ ಮಟ್ಟದ ಸವಿತಾ ಸಮಾಜದ ವಧು–ವರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಸವಿತಾ ಸಮಾಜದ ಯುವಕರು ಸಾಂಪ್ರದಾಯಿಕ ಕುಲವೃತ್ತಿಗೆ ಸೀಮಿತವಾಗಿಲ್ಲ. ಶೈಕ್ಷಣಿಕವಾಗಿ ದಾಪುಗಾಲು ಹಾಕುತ್ತಿದ್ದು, ನಾನಾ ಕ್ಷೇತ್ರಗಳಲ್ಲಿ ಉದ್ಯೋಗ, ವ್ಯಾಪಾರದಲ್ಲಿ ತೊಡಗಿದ್ದಾರೆ. ಆದರೆ, ಮದುವೆ ವಿಚಾರ ಬಂದಾಗ ಇತ್ತೀಚೆಗೆ ಯುವ ಜನರಲ್ಲಿ ಬೇಕು, ಬೇಡಿಕೆಗಳು ಹೆಚ್ಚುತ್ತಿದ್ದು, ಮದುವೆ ವಿಳಂಬಕ್ಕೆ ಕಾರಣವಾಗುತ್ತಿವೆ ಎಂದರು.</p>.<p>ದಾವಣಗೆರೆ ಸವಿತಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೆಂಕಟಾಚಲಪತಿ ಪಿ.ಬಿ. ಮಾತನಾಡಿ, ಮದುವೆಗೆ ಉತ್ತಮ ಸಂಗಾತಿ ಹುಡುಕಿಕೊಳ್ಳುವುದು ಅತಿ ಅವಶ್ಯಕ. ಆದರೆ, ಮದುವೆ ಬ್ರೋಕರ್ಗಳು ಇದನ್ನೇ ಬಂಡವಾಳ ಮಾಡಿಕೊಂಡು ಸುಲಿಗೆ ಮಾಡುತ್ತಾರೆ. ಜೊತೆಗೆ ಸುಳ್ಳು ಹೇಳಿ ಸಂಬಂಧ ಕುದುರಿಸುತ್ತಾರೆ. ಇದನ್ನು ತಪ್ಪಿಸಲು ವಧು-ವರರ ಸಮಾವೇಶ ಸಹಕಾರಿಯಾಗಿದೆ. ವೇದಿಕೆಯಿಂದ ಕಳೆದ 9 ವರ್ಷಗಳಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಮದುವೆಗಳು ನಿಶ್ಚಯವಾಗಿವೆ ಎಂದರು.</p>.<p>ನಿವೃತ್ತ ಶಿಕ್ಷಕ ನಾಗೇಶ್, ನಿವೃತ್ತ ಎಎಸ್ಐ ಶ್ರೀನಿವಾಸ, ಮನೋಹರ್ ಕುಮಾರ್, ರಾಮಲಿಂಗಪ್ಪ, ನಾರಾಯಣ ಹಡಪದ, ಎಎಸ್ಐ ಎಂ.ಸುರೇಶ್, ಆರ್.ನಾಗರಾಜ್, ವಿಜಯ ಭಾಸ್ಕರ್ ಇಟಗಿ, ಎನ್.ವೇಣುಗೋಪಾಲ, ಗುರುರಾಜ್, ಡಾ.ರಾಘವೇಂದ್ರ ಗುರ್ಜಾಲ, ಕೃಷ್ಣ ಹಡಪದ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>