<p>ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧ ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ 15 ಸಂತ್ರಸ್ತರಿಗೆ ಜಾತಿ ನಿಂದನೆ, ಹಲ್ಲೆ, ಲೈಂಗಿಕ ಕಿರುಕುಳಿಗೆ ಸಂಬಂಧಿಸಿ ಒಟ್ಟು ₹ 26.55 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.</p>.<p>ಇಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಿವೆ. ಕಳೆದ 3 ತಿಂಗಳಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಹೊಸಪೇಟೆ ತಾಲ್ಲೂಕಿನಲ್ಲಿ 5, ಹರಪನಹಳ್ಳಿ, ಕೂಡ್ಲಿಗಿಗಳಲ್ಲಿ ತಲಾ 1, ಹಡಗಲಿ ತಾಲ್ಲೂಕಿನಲ್ಲಿ 2 ಮತ್ತು ಡಿಸಿಆರ್ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಪ್ರಕರಣ ಸೇರಿ ಒಟ್ಟು 13 ಪ್ರಕರಣ ದಾಖಲಾಗಿವೆ. 7 ಪ್ರಕಾರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ಇನ್ನೂ ಉಳಿದವುಗಳು ತನಿಖಾ ಹಂತದಲ್ಲಿ ಬಾಕಿ ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ಕಳೆದ 3 ತಿಂಗಳಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ದಾಖಲಾದ 2 ಪ್ರಕರಣ, ಕೂಡ್ಲಿಗಿ ತಾಲೂಕಿನಲ್ಲಿ ಡಿಸಿ ಆರ್ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2 ಪ್ರಕರಣ ಸೇರಿ ಒಟ್ಟು 5 ಪ್ರಕರಣಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2025 ಡಿಸೆಂಬರ್ನಿಂದ ಮಾರ್ಚ್ 18ರವರೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಖಲಾದ 97 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದು, ಯಾವುದೇ ಪ್ರಕರಣಗಳು ಇತ್ಯರ್ಥವಾಗಿರುವುದಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ದೌರ್ಜನ್ಯ ತಡೆ ಕಾಯ್ದೆ ಕುರಿತು ಜಿಲ್ಲಾದ್ಯಂತ ನಿರಂತರವಾಗಿ ಜಾಗೃತಿ ಕಾರ್ಯಾಗಾರ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆದರೂ ಇಂತಹ ಪ್ರಕರಣಗಳು ದಾಖಲಾಗುತ್ತಿರುವುದು ಬೇಸರದ ಸಂಗತಿ ಎಂದರು.</p>.<p>ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳನ್ನು ವಿಳಂಬ ಮಾಡದೆ ತನಿಖೆ ನಡೆಸಿ, ನಿಗದಿತ ಅವಧಿಯೊಳಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು. ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಧನವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು ಎಂದು ಸೂಚಿಸಿದರು.</p>.<p>ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಅಲ್ಲಲ್ಲಿ ಕೇಳಿಬರುತ್ತಿರುವ ಅಸ್ಪೃಶ್ಯತೆ ಆಚರಣೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಪಿಡುಗುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಇಂತಹ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಎ.ಕಾಳೆ ಇದ್ದರು.</p>.<p>Highlights - ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಜಾಗೃತಿ ಕಾರ್ಯಕ್ರಮ ನಡೆಸಿ ಎಸ್ಸಿ, ಎಸ್ಟಿ ಕಾಲೊನಿಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಸ್ಥಳೀಯ ಆಡಳಿತ ಸಂಸ್ಥೆಗಳು ಎಚ್ಚರ ವಹಿಸಲು ಸಲಹೆ</p>.<p>Quote - ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಕವಿತಾ ಎಸ್. ಮನ್ನಿಕೇರಿ ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ಜಿಲ್ಲೆಯ ವಿವಿಧ ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ 15 ಸಂತ್ರಸ್ತರಿಗೆ ಜಾತಿ ನಿಂದನೆ, ಹಲ್ಲೆ, ಲೈಂಗಿಕ ಕಿರುಕುಳಿಗೆ ಸಂಬಂಧಿಸಿ ಒಟ್ಟು ₹ 26.55 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.</p>.<p>ಇಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕುರಿತ ಜಿಲ್ಲಾ ಮಟ್ಟದ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಿವೆ. ಕಳೆದ 3 ತಿಂಗಳಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಹೊಸಪೇಟೆ ತಾಲ್ಲೂಕಿನಲ್ಲಿ 5, ಹರಪನಹಳ್ಳಿ, ಕೂಡ್ಲಿಗಿಗಳಲ್ಲಿ ತಲಾ 1, ಹಡಗಲಿ ತಾಲ್ಲೂಕಿನಲ್ಲಿ 2 ಮತ್ತು ಡಿಸಿಆರ್ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 4 ಪ್ರಕರಣ ಸೇರಿ ಒಟ್ಟು 13 ಪ್ರಕರಣ ದಾಖಲಾಗಿವೆ. 7 ಪ್ರಕಾರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ಇನ್ನೂ ಉಳಿದವುಗಳು ತನಿಖಾ ಹಂತದಲ್ಲಿ ಬಾಕಿ ಇವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ಕಳೆದ 3 ತಿಂಗಳಲ್ಲಿ ಹೊಸಪೇಟೆ ತಾಲ್ಲೂಕಿನಲ್ಲಿ ದಾಖಲಾದ 2 ಪ್ರಕರಣ, ಕೂಡ್ಲಿಗಿ ತಾಲೂಕಿನಲ್ಲಿ ಡಿಸಿ ಆರ್ಇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 2 ಪ್ರಕರಣ ಸೇರಿ ಒಟ್ಟು 5 ಪ್ರಕರಣಗಳಿಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 2025 ಡಿಸೆಂಬರ್ನಿಂದ ಮಾರ್ಚ್ 18ರವರೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಖಲಾದ 97 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದ್ದು, ಯಾವುದೇ ಪ್ರಕರಣಗಳು ಇತ್ಯರ್ಥವಾಗಿರುವುದಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ದೌರ್ಜನ್ಯ ತಡೆ ಕಾಯ್ದೆ ಕುರಿತು ಜಿಲ್ಲಾದ್ಯಂತ ನಿರಂತರವಾಗಿ ಜಾಗೃತಿ ಕಾರ್ಯಾಗಾರ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆದರೂ ಇಂತಹ ಪ್ರಕರಣಗಳು ದಾಖಲಾಗುತ್ತಿರುವುದು ಬೇಸರದ ಸಂಗತಿ ಎಂದರು.</p>.<p>ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳನ್ನು ವಿಳಂಬ ಮಾಡದೆ ತನಿಖೆ ನಡೆಸಿ, ನಿಗದಿತ ಅವಧಿಯೊಳಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕು. ಸಂತ್ರಸ್ತರಿಗೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಧನವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು ಎಂದು ಸೂಚಿಸಿದರು.</p>.<p>ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಅಲ್ಲಲ್ಲಿ ಕೇಳಿಬರುತ್ತಿರುವ ಅಸ್ಪೃಶ್ಯತೆ ಆಚರಣೆ ಮತ್ತು ಸಾಮಾಜಿಕ ಬಹಿಷ್ಕಾರದಂತಹ ಪಿಡುಗುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಇಂತಹ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ವೈ.ಎ.ಕಾಳೆ ಇದ್ದರು.</p>.<p>Highlights - ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಜಾಗೃತಿ ಕಾರ್ಯಕ್ರಮ ನಡೆಸಿ ಎಸ್ಸಿ, ಎಸ್ಟಿ ಕಾಲೊನಿಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಸ್ಥಳೀಯ ಆಡಳಿತ ಸಂಸ್ಥೆಗಳು ಎಚ್ಚರ ವಹಿಸಲು ಸಲಹೆ</p>.<p>Quote - ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಕೆಲವರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಸಾಬೀತಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಕವಿತಾ ಎಸ್. ಮನ್ನಿಕೇರಿ ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>