<p><strong>ಹಗರಿಬೊಮ್ಮನಹಳ್ಳಿ</strong> <strong>(ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಹರೇಗೊಂಡನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಒಳಗಿನ ಮೇಲ್ಚಾವಣಿಯ ಸಿಮೆಂಟ್ ಪದರು ಬುಧವಾರ ಕುಸಿದು ಬಿದ್ದಿದ್ದು, ಮಕ್ಕಳು ಹೊರಗಿದ್ದ ಕಾರಣ ಯಾವುದೆ ಅವಘಡ ಸಂಭವಿಸಿಲ್ಲ.</p>.<p>ಶಾಲೆಯ ನಲಿಕಲಿ ಕೊಠಡಿಯ ಮೇಲ್ಚಾವಣಿ ಶಿಥಿಲಗೊಂಡಿದ್ದರೂ ಅಲ್ಲಿಯೇ ತರಗತಿಗಳು ನಡೆಯುತ್ತಿದ್ದವು. ಮಕ್ಕಳು ತರಗತಿ ಒಳಗೆ ತೆರಳಿರಲಿಲ್ಲ, ಕೊಠಡಿಯ ಬಾಗಿಲು ತೆರೆಯುತ್ತಿದ್ದಂತೆಯೇ ಪದರು ಕುಸಿದು ಟೇಬಲ್ ಗಳ ಮೇಲೆ ಬಿದ್ದಿದೆ.</p>.<p>ಶಾಲೆಯ ಕೊಠಡಿಗಳನ್ನು ದುರಸ್ತಿಗೊಳಿಸಬೇಕು, ಗ್ರಾಮ ಪಂಚಾಯ್ತಿಯಿಂದ ಹೊಸದಾಗಿ ಅಭಿವೃದ್ಧಿಗೊಳಿಸುವ ನಿವೇಶನಗಳಿಂದ ಶೇಕಡ 3 ರಷ್ಟು ಶುಲ್ಕ ಪಡೆದರೂ ಶಾಲೆಯಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಗೋಜಿಗೆ ಯಾರೂ ಹೋಗಿಲ್ಲ ಎಂದು ಗ್ರಾಮದ ಮುಖಂಡ ಕರಿಬಸಪ್ಪ ಆರೋಪಿಸಿದರು.</p>.<p>ಶಾಲೆಯ ಕೊಠಡಿಯೊಂದರ ಬಾಗಿಲು ತೆರೆದಾಗ ಮಕ್ಕಳಿಲ್ಲದ ಸಮಯದಲ್ಲಿ ಮೇಲ್ಚಾವಣಿ ಬಿದ್ದಿದೆ, ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong> <strong>(ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಹರೇಗೊಂಡನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಒಳಗಿನ ಮೇಲ್ಚಾವಣಿಯ ಸಿಮೆಂಟ್ ಪದರು ಬುಧವಾರ ಕುಸಿದು ಬಿದ್ದಿದ್ದು, ಮಕ್ಕಳು ಹೊರಗಿದ್ದ ಕಾರಣ ಯಾವುದೆ ಅವಘಡ ಸಂಭವಿಸಿಲ್ಲ.</p>.<p>ಶಾಲೆಯ ನಲಿಕಲಿ ಕೊಠಡಿಯ ಮೇಲ್ಚಾವಣಿ ಶಿಥಿಲಗೊಂಡಿದ್ದರೂ ಅಲ್ಲಿಯೇ ತರಗತಿಗಳು ನಡೆಯುತ್ತಿದ್ದವು. ಮಕ್ಕಳು ತರಗತಿ ಒಳಗೆ ತೆರಳಿರಲಿಲ್ಲ, ಕೊಠಡಿಯ ಬಾಗಿಲು ತೆರೆಯುತ್ತಿದ್ದಂತೆಯೇ ಪದರು ಕುಸಿದು ಟೇಬಲ್ ಗಳ ಮೇಲೆ ಬಿದ್ದಿದೆ.</p>.<p>ಶಾಲೆಯ ಕೊಠಡಿಗಳನ್ನು ದುರಸ್ತಿಗೊಳಿಸಬೇಕು, ಗ್ರಾಮ ಪಂಚಾಯ್ತಿಯಿಂದ ಹೊಸದಾಗಿ ಅಭಿವೃದ್ಧಿಗೊಳಿಸುವ ನಿವೇಶನಗಳಿಂದ ಶೇಕಡ 3 ರಷ್ಟು ಶುಲ್ಕ ಪಡೆದರೂ ಶಾಲೆಯಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಗೋಜಿಗೆ ಯಾರೂ ಹೋಗಿಲ್ಲ ಎಂದು ಗ್ರಾಮದ ಮುಖಂಡ ಕರಿಬಸಪ್ಪ ಆರೋಪಿಸಿದರು.</p>.<p>ಶಾಲೆಯ ಕೊಠಡಿಯೊಂದರ ಬಾಗಿಲು ತೆರೆದಾಗ ಮಕ್ಕಳಿಲ್ಲದ ಸಮಯದಲ್ಲಿ ಮೇಲ್ಚಾವಣಿ ಬಿದ್ದಿದೆ, ಕೂಡಲೇ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>