ಸನ್ಮಾನ ನೆರವೇರಿಸಿ ಮಾತನಾಡಿದ ಸಂಚಾರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಹಾಂತೇಶ್ ಸಜ್ಜನ್, ‘ಇಂದು ಕೆಲಸದಿಂದ ನಿವೃತ್ತರಾಗುತ್ತಿರುವ ಇಬ್ಬರೂ ಸಿಬ್ಬಂದಿ ಇಲಾಖೆಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದೇ ಕರ್ತವ್ಯ ನಿರ್ವಹಿಸಿದ್ದಾರೆ. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ. ಸರ್ಕಾರಿ ಕೆಲಸದಲ್ಲಿ ಬದ್ಧತೆಯಿಂದ ಕೆಲಸ ನಿರ್ವಹಿಸಿದರೆ ನಿವೃತ್ತ ಜೀವನ ಬಹಳ ಸುಖಕರ, ತೃಪ್ತಿದಾಯಕವಾಗಿರುತ್ತದೆ’ ಎಂದು ಹೇಳಿದರು.