ತುರ್ತು ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಗ ಬಡ್ತಿ ನೀಡಿ ಪಾಸು ಮಾಡಬೇಕೆಂಬ ನಿಲುವನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಹೊಂದಿದೆ. ಆದರೆ ಕೊರೊನಾ ಸೋಂಕು ಹರಡುವಿಕೆ ಸಂದರ್ಭದಲ್ಲಿ ಯಾವುದೇ ಹೇಳಿಕೆ ನೀಡದೇ ಸರ್ಕಾರ ಪರೀಕ್ಷೆ ರದ್ದುಗೊಳಿಸಿದೆ. ಈಗ ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್ನ ಆಂತರಿಕ ಪರೀಕ್ಷೆಯನ್ನು ಆನ್ಲೈನ್ನಲ್ಲಿ ನಡೆಸಿದೆ. ಕುಲಪತಿಗಳು ಪರೀಕ್ಷೆ ನಡೆಸಲಾಗುವುದು ಎಂದು ಹೇಳಿರುವುದು ಸರಿಯಲ್ಲ. ಪೋಷಕರು, ವಿದ್ಯಾರ್ಥಿಗಳ ಜೊತೆಗೆ ವಿಶ್ವವಿದ್ಯಾಲಯ ಸಭೆ ನಡೆಸಿ ಮುಂದುವರೆಯಬೇಕು ಎಂದು ಒತ್ತಾಯಿಸಿದರು.