<p><strong>ಹೊಸಪೇಟೆ (ವಿಜಯನಗರ): </strong>ತಾಲ್ಲೂಕು ಆಡಳಿತದಿಂದ ಸೋಮವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿ ಸರಳ ರೀತಿಯಲ್ಲಿ ಆಚರಿಸಲಾಯಿತು.</p>.<p>ಕೆಎಎಸ್ ಪ್ರೊಬೆಷನರಿ ಅಧಿಕಾರಿ ಹನುಮಂತಪ್ಪ ಸಿರಟ್ಟಿ ಅವರು ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಗ್ರೇಡ್- 2 ತಹಶೀಲ್ದಾರ್ ಮೇಘಾ, ಶಿರಸ್ತೇದಾರ್ ರಮೇಶ್, ಮಂಜುನಾಥ ಇದ್ದರು.</p>.<p><strong>ಶಂಕರ ಜ್ಞಾನ ಮಂದಿರ:</strong></p>.<p>ಇಲ್ಲಿನ ಎಂ.ಜೆ. ನಗರದ ಶಂಕರ ಜ್ಞಾನ ಮಂದಿರದಲ್ಲಿ ಆದಿ ಶಂಕರಾಚಾರ್ಯ ಜಯಂತಿ ಸರಳವಾಗಿ ಆಚರಿಸಲಾಯಿತು.ಶಂಕರಾಚಾರ್ಯರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಉದ್ಯಮಿ ಪಂತರ್ ಜಯಂತ್ ಮಾತನಾಡಿ, ‘ಶಂಕರಾಚಾರ್ಯರ ಅದ್ವೈತ ಸಿದ್ಧಾಂತ ತತ್ವದಡಿ ಅವರ ಸಂಪ್ರದಾಯಗಳನ್ನು ಸರ್ವರೂ ಬೆಳೆಸಿಕೊಳ್ಳುವ ಸಲುವಾಗಿ ಶಂಕರ ಜ್ಞಾನ ಮಂದಿರವನ್ನು 2004ರಲ್ಲಿ ನಿರ್ಮಿಸಲಾಯಿತು. ಪ್ರತಿವರ್ಷ ಶಂಕರಾಚಾರ್ಯರ ಜಯಂತಿಯನ್ನು ಅಚರಿಸಿಕೊಂಡು ಬರಲಾಗುತ್ತಿದ್ದು, ಕೋವಿಡ್ನಿಂದ ಈ ಬಾರಿ ಸರಳವಾಗಿ ಆಚರಿಸಿ, ಬಡ 108 ಮಹಿಳೆಯರಿಗೆ ಉಚಿತವಾಗಿ ಸೀರೆ ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ತಾಲ್ಲೂಕು ಆಡಳಿತದಿಂದ ಸೋಮವಾರ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶಂಕರಾಚಾರ್ಯರ ಜಯಂತಿ ಸರಳ ರೀತಿಯಲ್ಲಿ ಆಚರಿಸಲಾಯಿತು.</p>.<p>ಕೆಎಎಸ್ ಪ್ರೊಬೆಷನರಿ ಅಧಿಕಾರಿ ಹನುಮಂತಪ್ಪ ಸಿರಟ್ಟಿ ಅವರು ಶಂಕರಾಚಾರ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಗ್ರೇಡ್- 2 ತಹಶೀಲ್ದಾರ್ ಮೇಘಾ, ಶಿರಸ್ತೇದಾರ್ ರಮೇಶ್, ಮಂಜುನಾಥ ಇದ್ದರು.</p>.<p><strong>ಶಂಕರ ಜ್ಞಾನ ಮಂದಿರ:</strong></p>.<p>ಇಲ್ಲಿನ ಎಂ.ಜೆ. ನಗರದ ಶಂಕರ ಜ್ಞಾನ ಮಂದಿರದಲ್ಲಿ ಆದಿ ಶಂಕರಾಚಾರ್ಯ ಜಯಂತಿ ಸರಳವಾಗಿ ಆಚರಿಸಲಾಯಿತು.ಶಂಕರಾಚಾರ್ಯರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಉದ್ಯಮಿ ಪಂತರ್ ಜಯಂತ್ ಮಾತನಾಡಿ, ‘ಶಂಕರಾಚಾರ್ಯರ ಅದ್ವೈತ ಸಿದ್ಧಾಂತ ತತ್ವದಡಿ ಅವರ ಸಂಪ್ರದಾಯಗಳನ್ನು ಸರ್ವರೂ ಬೆಳೆಸಿಕೊಳ್ಳುವ ಸಲುವಾಗಿ ಶಂಕರ ಜ್ಞಾನ ಮಂದಿರವನ್ನು 2004ರಲ್ಲಿ ನಿರ್ಮಿಸಲಾಯಿತು. ಪ್ರತಿವರ್ಷ ಶಂಕರಾಚಾರ್ಯರ ಜಯಂತಿಯನ್ನು ಅಚರಿಸಿಕೊಂಡು ಬರಲಾಗುತ್ತಿದ್ದು, ಕೋವಿಡ್ನಿಂದ ಈ ಬಾರಿ ಸರಳವಾಗಿ ಆಚರಿಸಿ, ಬಡ 108 ಮಹಿಳೆಯರಿಗೆ ಉಚಿತವಾಗಿ ಸೀರೆ ವಿತರಿಸಲಾಗಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>