ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನುಡಿದಂತೆ ನಡೆದ ಸರ್ಕಾರ ನಮ್ಮದು: ಸಚಿವೆ ಶಶಿಕಲಾ ಜೊಲ್ಲೆ

Last Updated 13 ಅಕ್ಟೋಬರ್ 2022, 8:08 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೀಸಲಾತಿ‌ ಹೆಚ್ಚಿಸುವ ಬೇಡಿಕೆ ಈಡೇರಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದು ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು.

ಜಿಲ್ಲೆಯ ಹೂವಿನಹಡಗಲಿಯಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ‌ಕೆಲಸದ ಬಗ್ಗೆ ಕಾಂಗ್ರೆಸ್ ನವರು ಟೀಕಿಸುತ್ತಿದ್ದಾರೆ. ಆದರೆ, ಅಧಿಕಾರದಲ್ಲಿದ್ದಾಗ ಅವರೇಕೆ ಈ ಕೆಲಸ ಮಾಡಿಲಿಲ್ಲ ಎಂದು ಪ್ರಶ್ನಿಸಿದರು.

ಜನರ ಭಾವನೆಗಳಿಗೆ ಸ್ಪಂದಿಸಿ ಸರ್ಕಾರ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಈಗ ಸಂಕಲ್ಪ ಯಾತ್ರೆ ಮೂಲಕ 150 ಸ್ಥಾನ ಗಳಲ್ಲಿ ಗೆದ್ದು ಮತ್ತೆ ಸರ್ಕಾರ ರಚಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT