ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾ ಮಠದ ಸಿದ್ಧಲಿಂಗ ಶ್ರೀ ಹಂಪಿಗೆ ಭೇಟಿ

Last Updated 9 ಫೆಬ್ರುವರಿ 2022, 11:10 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಬುಧವಾರ ಹಂಪಿಗೆ ಭೇಟಿ ನೀಡಿದರು.

ಪಂಪ ವಿರೂಪಾಕ್ಷೇಶ್ವರನ ದರ್ಶನ ಪಡೆದ ಸ್ವಾಮೀಜಿ, ಕಮಲ ಮಹಲ್‌, ಮಹಾನವಮಿ ದಿಬ್ಬ, ಸಾಸಿವೆಕಾಳು ಗಣಪ, ಕಡಲೆಕಾಳು ಗಣಪ, ವಿಜಯ ವಿಠಲ ದೇವಸ್ಥಾನಕ್ಕೆ ಭೇಟಿ ನೀಡಿ ಕಣ್ತುಂಬಿಕೊಂಡರು.

ಕರ್ನಾಟಕ ಪ್ರವಾಸಿ ಮಾರ್ಗದರ್ಶಿ ಸಂಘದವರು ಅವರ ಜೊತೆಗಿದ್ದು ಸ್ಮಾರಕಗಳ ಮಹತ್ವ ವಿವರಿಸಿದರು. ಸಂಘದ ರಾಜ್ಯ ಅಧ್ಯಕ್ಷ ಮಂಜುನಾಥ ಗೌಡ, ಕಾರ್ಯಕಾರಿ ಮಂಡಳಿ ನಿರ್ದೇಶಕ ಜೋಳದ ನಾಗರಾಜ, ಮಲ್ಲಿಕಾರ್ಜುನ, ಶ್ರೀಕೃಷ್ಣದೇವರಾಯ ಸಂಘದ ಅಧ್ಯಕ್ಷ ಶಿವಕುಮಾರ್, ವಿರುಪಾಕ್ಷಿ ಪ್ರಭಾ, ಎಚ್. ಪ್ರಕಾಶ್, ರಾಜ್ಯ ಕಾರ್ಯಕಾರಿ ಮಂಡಳಿ ನಿರ್ದೇಶಕ ಎಚ್‌. ಹುಲುಗಪ್ಪ ಹುಲಿಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT