‘ಗಣೇಶ, ದುರ್ಗಾದೇವಿ, ವಿಶ್ವಕರ್ಮ, ಕಾಮದೇವ ಮೂರ್ತಿಗಳನ್ನು ಹಬ್ಬಗಳ ಸಮಯದಲ್ಲಿ ತಯಾರಿಸಿ ಮಾರುತ್ತೇನೆ. ಕಾರಹುಣ್ಣಿಮೆ ಸಮಯದಲ್ಲಿ ಎತ್ತುಗಳ ಕೊಂಬಿಗೆ ಚಿತ್ರಾಲಂಕಾರ ಮಾಡುತ್ತೇನೆ. ಹೆಚ್ಚಿನದಾಗಿ ಚಿಕ್ಕ ಮಣ್ಣಿನ ಮೂರ್ತಿಗಳನ್ನು ತಯಾರಿಸುತ್ತೇನೆ. ಬೇಡಿಕೆ ಬಂದರಷ್ಟೇ ದೊಡ್ಡ ಗಾತ್ರದ ಮೂರ್ತಿ ಮಾಡಿಕೊಡುತ್ತೇನೆ. ಕಳೆದ ನಲವತ್ತು ವರ್ಷಗಳಿಂದ ಈ ವೃತ್ತಿ ಮಾಡುತ್ತಿದ್ದೇನೆ’ ಎಂದು ಪರಶುರಾಮ ತಿಳಿಸಿದರು.