<p><strong>ಹೊಸಪೇಟೆ</strong>: ಹಂಪಿ ಉತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಹಿತದೃಷ್ಠಿಯಿಂದ ನಿಗಮವು ಬಸ್ ವ್ಯವಸ್ಥೆ ಮಾಡಿದ್ದು, ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಿಂದ ಕಡ್ಡಿರಾಂಪುರ ಕ್ರಾಸ್-ಹಂಪಿ- ಕಮಲಾಪುರ- ಕಡ್ಡಿರಾಂಪುರ ಕ್ರಾಸ್ ಮಾರ್ಗವಾಗಿ ದುಂಡು ಸುತ್ತುಗಳಲ್ಲಿ ಉಚಿತ ಬಸ್ಗಳು ಕಾರ್ಯಾಚರಣೆ ಮಾಡಲಿವೆ.</p>.<p>ಈ ಬಸ್ಗಳಲ್ಲಿ 5 ಹಸಿರು ಬಣ್ಣದ ಬಸ್ಗಳನ್ನು ಮಹಿಳೆಯರಿಗಾಗಿ ಮೀಸಲಿರಿಸಲಾಗಿದೆ. ಫೆ.2ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ</strong></p>.<p>ಪ್ರವಾಸೋದ್ಯಮ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2023-24ನೇ ಸಾಲಿನಲ್ಲಿ 50 ಇತರೆ ಪ್ರವಾಸಿ ಗೈಡ್ಗಳಿಗೆ 3 ತಿಂಗಳ ಕಾಲ ತರಬೇತಿ ಹಾಗೂ ಜಲಪಾತ, ಅರಣ್ಯಧಾಮ, ಪರಿಸರಧಾಮ ಇನ್ನಿತರೆ ಪ್ರಾಕೃತಿಕ ನೈಸರ್ಗಿಕ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸಲು 50 ನೇಚರ್ ಗೈಡ್ಗಳಿಗೆ 2 ತಿಂಗಳ ಕಾಲ ತರಬೇತಿ ಸೇರಿದಂತೆ ಒಟ್ಟು 100 ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲಾಗುತ್ತದೆ.</p>.<p>ಆಸಕ್ತರು ಪ್ರವಾಸೋದ್ಯಮ ಇಲಾಖೆಯಲ್ಲಿ ಫೆ.5ರಿಂದ ಅರ್ಜಿ ಪಡೆದುಕೊಂಡು, ಫೆ.29ರೊಳಗೆ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರವಾಸೋದ್ಯಮ ಇಲಾಖೆ, ಲೋಟಸ್ ಮಹಲ್ ಹತ್ತಿರ, ಕಮಲಾಪುರ ಕಚೇರಿ ದೂ.ಸಂಖ್ಯೆ: 08394-295640ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಹಂಪಿ ಉತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.</p>.<p>ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಹಿತದೃಷ್ಠಿಯಿಂದ ನಿಗಮವು ಬಸ್ ವ್ಯವಸ್ಥೆ ಮಾಡಿದ್ದು, ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಿಂದ ಕಡ್ಡಿರಾಂಪುರ ಕ್ರಾಸ್-ಹಂಪಿ- ಕಮಲಾಪುರ- ಕಡ್ಡಿರಾಂಪುರ ಕ್ರಾಸ್ ಮಾರ್ಗವಾಗಿ ದುಂಡು ಸುತ್ತುಗಳಲ್ಲಿ ಉಚಿತ ಬಸ್ಗಳು ಕಾರ್ಯಾಚರಣೆ ಮಾಡಲಿವೆ.</p>.<p>ಈ ಬಸ್ಗಳಲ್ಲಿ 5 ಹಸಿರು ಬಣ್ಣದ ಬಸ್ಗಳನ್ನು ಮಹಿಳೆಯರಿಗಾಗಿ ಮೀಸಲಿರಿಸಲಾಗಿದೆ. ಫೆ.2ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><strong>ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ</strong></p>.<p>ಪ್ರವಾಸೋದ್ಯಮ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2023-24ನೇ ಸಾಲಿನಲ್ಲಿ 50 ಇತರೆ ಪ್ರವಾಸಿ ಗೈಡ್ಗಳಿಗೆ 3 ತಿಂಗಳ ಕಾಲ ತರಬೇತಿ ಹಾಗೂ ಜಲಪಾತ, ಅರಣ್ಯಧಾಮ, ಪರಿಸರಧಾಮ ಇನ್ನಿತರೆ ಪ್ರಾಕೃತಿಕ ನೈಸರ್ಗಿಕ ಪ್ರವಾಸಿ ತಾಣಗಳಲ್ಲಿ ಕಾರ್ಯನಿರ್ವಹಿಸಲು 50 ನೇಚರ್ ಗೈಡ್ಗಳಿಗೆ 2 ತಿಂಗಳ ಕಾಲ ತರಬೇತಿ ಸೇರಿದಂತೆ ಒಟ್ಟು 100 ಅಭ್ಯರ್ಥಿಗಳಿಗೆ ಪ್ರವಾಸಿ ಮಾರ್ಗದರ್ಶಿ ತರಬೇತಿ ನೀಡಲಾಗುತ್ತದೆ.</p>.<p>ಆಸಕ್ತರು ಪ್ರವಾಸೋದ್ಯಮ ಇಲಾಖೆಯಲ್ಲಿ ಫೆ.5ರಿಂದ ಅರ್ಜಿ ಪಡೆದುಕೊಂಡು, ಫೆ.29ರೊಳಗೆ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರವಾಸೋದ್ಯಮ ಇಲಾಖೆ, ಲೋಟಸ್ ಮಹಲ್ ಹತ್ತಿರ, ಕಮಲಾಪುರ ಕಚೇರಿ ದೂ.ಸಂಖ್ಯೆ: 08394-295640ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>