<p><strong>ಹೊಸಪೇಟೆ (ವಿಜಯನಗರ):</strong> ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಹಾಗೂ ಸೇನೆಗೆ ಇನ್ನಷ್ಟು ಶಕ್ತಿ ಸಿಗಲಿ ಎಂದು ಹಾರೈಸಿ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಹಂಪಿ ವಿರೂಪಾಕ್ಷ, ಜಂಬುನಾಥ, ಬುಕ್ಕಸಾಗರದ ಏಳು ಹೆಡೆ ನಾಗಪ್ಪ ಕ್ಷೇತ್ರ, ವಡಕರಾಯ ದೇವಸ್ಥಾನ ಸಹಿತ ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>‘ದೇಶಕ್ಕೆ ಒಳಿತಾಗಲಿ, ಸೇನೆಗೆ ಇನ್ನಷ್ಟು ಶಕ್ತಿ ದೊರಕಲಿ, ದೇಶ ಸುಭಿಕ್ಷವಾಗಲಿ, ದೇಶದ ಶತ್ರುಗಳ ಶಕ್ತಿ ಅಡಗಲಿ, ಅವರಿಗೆ ಉತ್ತಮ ಬುದ್ಧಿ ಬರಲಿ ಮುಂತಾದ ಪ್ರಾರ್ಥನೆ ಸಲ್ಲಿಸಿದ ಅರ್ಚಕರು, ವಿಶೇಷ ಅರ್ಚನೆ, ಅಭಿಷೇಕ, ನೈವೇದ್ಯ ಸೇವೆ ಸಲ್ಲಿಸಿ, ಆರತಿ ಬೆಳಗಿದರು.</p>.<p>ಮಸೀದಿಗಳಲ್ಲಿ ಇಂದು ವಿಶೇಷ ಪ್ರಾರ್ಥನೆ: ಭಾರತೀಯ ಸೈನಿಕರ ಶ್ರೇಯಸ್ಸಿಗೆ ಹಾರೈಸಿ ಶುಕ್ರವಾರ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.</p>.<p>‘ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಯಶಸ್ವಿಯಾಗಿದ್ದಕ್ಕೆ ಹಾಗೂ ಸೇನೆಗೆ ಇನ್ನಷ್ಟು ಶಕ್ತಿ ಸಿಗಲಿ ಎಂದು ಹಾರೈಸಿ ಧಾರ್ಮಿಕ ದತ್ತಿ ಇಲಾಖೆಯ ಎಲ್ಲ ದೇವಸ್ಥಾನಗಳಲ್ಲಿ ಗುರುವಾರ ಬೆಳಿಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಹಂಪಿ ವಿರೂಪಾಕ್ಷ, ಜಂಬುನಾಥ, ಬುಕ್ಕಸಾಗರದ ಏಳು ಹೆಡೆ ನಾಗಪ್ಪ ಕ್ಷೇತ್ರ, ವಡಕರಾಯ ದೇವಸ್ಥಾನ ಸಹಿತ ಹಲವಾರು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>‘ದೇಶಕ್ಕೆ ಒಳಿತಾಗಲಿ, ಸೇನೆಗೆ ಇನ್ನಷ್ಟು ಶಕ್ತಿ ದೊರಕಲಿ, ದೇಶ ಸುಭಿಕ್ಷವಾಗಲಿ, ದೇಶದ ಶತ್ರುಗಳ ಶಕ್ತಿ ಅಡಗಲಿ, ಅವರಿಗೆ ಉತ್ತಮ ಬುದ್ಧಿ ಬರಲಿ ಮುಂತಾದ ಪ್ರಾರ್ಥನೆ ಸಲ್ಲಿಸಿದ ಅರ್ಚಕರು, ವಿಶೇಷ ಅರ್ಚನೆ, ಅಭಿಷೇಕ, ನೈವೇದ್ಯ ಸೇವೆ ಸಲ್ಲಿಸಿ, ಆರತಿ ಬೆಳಗಿದರು.</p>.<p>ಮಸೀದಿಗಳಲ್ಲಿ ಇಂದು ವಿಶೇಷ ಪ್ರಾರ್ಥನೆ: ಭಾರತೀಯ ಸೈನಿಕರ ಶ್ರೇಯಸ್ಸಿಗೆ ಹಾರೈಸಿ ಶುಕ್ರವಾರ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.</p>.<p>‘ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>