ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣದ ಆಮಿಷ ತೋರಿಸಿ ಮತಾಂತರ ಸರಿಯಾದುದಲ್ಲ: ಶ್ರೀ ಶ್ರೀ ರವಿಶಂಕರ್‌ ಗುರೂಜೀ

Last Updated 15 ಫೆಬ್ರವರಿ 2023, 9:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಬಡತನ, ಜನರ ದೌರ್ಬಲ್ಯವನ್ನು ಬಳಸಿಕೊಂಡು, ಹಣದ ಆಮಿಷ ತೋರಿಸಿ ಮತಾಂತರ ಮಾಡುತ್ತಿರುವುದು ಸರಿಯಾದುದಲ್ಲ’ ಎಂದು ‘ಆರ್ಟ್‌ ಆಫ್‌ ಲಿವಿಂಗ್‌’ ಸಂಸ್ಥಾಪಕ ರವಿಶಂಕರ್‌ ಗುರೂಜೀ ಹೇಳಿದರು.

ತಾಲ್ಲೂಕಿನ ಹಾರೋವನಹಳ್ಳಿ ಸಮೀಪದ ಫಾರ್ಮ್‌ ಹೌಸ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಸತ್ಸಂಗದಲ್ಲಿ ಭಾಗವಹಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

‘ಮತಾಂತರಕ್ಕಾಗಿಯೇ ವಿದೇಶಗಳಿಂದ ಅಪಾರ ಪ್ರಮಾಣದ ಹಣ ಭಾರತಕ್ಕೆ ಹರಿದು ಬರುತ್ತಿದೆ. ಹೊರದೇಶಗಳಿಂದ ಕೆಲವರು ಮತಾಂತರಕ್ಕಾಗಿಯೇ ನಮ್ಮ ದೇಶಕ್ಕೆ ಬರುತ್ತಿದ್ದಾರೆ. ಧರ್ಮ ಬೋಧನೆ ಹೆಸರಿನಲ್ಲಿ ಹೊರದೇಶಗಳಿಂದ ಬರುತ್ತಿರುವವರಲ್ಲಿ ಅನೇಕ ವಿದೇಶಿ ಯೋಜನೆಗಳು ಸಹ ಇರುತ್ತವೆ. ಆದರೆ, ಮತಾಂತರ ತುಂಬ ಚಿಂತಾಜನಕವಾದ ವಿಷಯ. ಬಡತನವನ್ನು ಬಳಸಿಕೊಂಡು ಅವರ ಧರ್ಮ ಬದಲಿಸುವ ಪದ್ಧತಿ ಸರಿಯಾದುದಲ್ಲ ಎಂದರು.

ಭಾರತದ ಶ್ರೇಷ್ಠತೆ, ಸಂಸ್ಕೃತಿ ಎತ್ತಿ ಹಿಡಿಯುವ ಕೆಲಸವಾಗಬೇಕಿದೆ. ಆತ್ಮಾಭಿಮಾನ, ಆತ್ಮವಿಶ್ವಾಸ ಹೆಚ್ಚಾದರೆ ಪ್ರತಿಯೊಬ್ಬರೂ ಅವರ ಧರ್ಮ, ಪರಂಪರೆ ಮುಂದುವರೆಸಿಕೊಂಡು ಹೋಗುತ್ತಾರೆ. ಬಡತನದಿಂದ ಮೇಲೆತ್ತುವ ಕೆಲಸ ಸಂಘ ಸಂಸ್ಥೆಗಳು ಈಗಾಗಲೇ ಮಾಡುತ್ತಿವೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT