<p><strong>ಹೊಸಪೇಟೆ</strong>: ಹಿಂದೂಗಳಲ್ಲಿನ ಜಾತಿ ತಾರತಮ್ಯ ಮೀರಿ ಎಲ್ಲರೂ ಒಗ್ಗಟ್ಟಿನಿಂದ ಸಾಗಿದಾಗ ಇಡೀ ಜಗತ್ತಿನಲ್ಲೇ ಶಕ್ತಿಶಾಲಿಯಾಗಿ ಬೆಳೆದು ನಿಲ್ಲುವುದು ಸಾಧ್ಯವಿದೆ ಎಂಬುದು ಈಗಾಗಲೇ ಸಾಬೀತಾಗಿದೆ, ಈ ಒಗ್ಗಟ್ಟನ್ನು ಮುರಿಯುವ ಪ್ರಯತ್ನವೂ ನಡೆಯುತ್ತಿದೆ, ಅದಕ್ಕೆ ಫಲ ಸಿಗದು ಎಂದು ಆರ್ಎಸ್ಎಸ್ನ ಆಂಧ್ರ, ತೆಲಂಗಾಣ, ಕರ್ನಟಕ ದಕ್ಷಿಣದ ಬೌದ್ಧಿಕ ಪ್ರಮುಖ ಶ್ರೀಧರಸ್ವಾಮಿ ಹೇಳಿದರು.</p>.<p>ಇಲ್ಲಿ ಗುರುವಾರ ಸಂಜೆ ನಗರಸಭೆಯ ನಾಲ್ಕು ವಾರ್ಡ್ಗಳ ಮಟ್ಟದ ಹಿಂದೂ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಈ ಹಿಂದೆ ಸಹ ನಮ್ಮ ಸಂಪತ್ತನ್ನು ಕೊಳ್ಳೆ ಹೊಡೆಯಲಾಯಿತೇ ಹೊರತು ನಮ್ಮ ಒಗ್ಗಟ್ಟನ್ನು ಮುರಿಯುವುದು ಸಾಧ್ಯವಾಗಿರಲಿಲ್ಲ, ಅದೇ ಪರಂಪರೆ ಮುಂದೆಯೂ ಇರಲಿದೆ, ಹೀಗಾಗಿ ನಮ್ಮ ಏಕತೆಯನ್ನು ತುಳಿಯಲು ಪ್ರಯತ್ನಿಸುವ ನಮ್ಮವರಿಗೆ ನಾವೆಲ್ಲ ನಮ್ಮ ಶಕ್ತಿಯ ಮನವರಿಕೆ ಮಾಡಬೇಕಾಗಿದೆ ಎಂದರು.</p>.<p>ಪಾಶ್ಚಾತ್ಯ ಅನುಕರಣೆಯೇ ನಾವು ಇಂದು ಗಂಭೀರವಾಗಿ ಪರಿಶೀಲಿಸಬೇಕಾದ ವಿಷಯವಾಗಿದ್ದು, ಅದರಿಂದ ವಿಮುಖವಾದರೆ ದೇಶಕ್ಕೆ ಯಾವ ತೊಂದರೆಯೂ ಇರುವುದಿಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ಸ್ವದೇಶಿ ವಸ್ತುಗಳ ಬಳಕೆ, ಆತ್ಮನಿರ್ಭರ ಭಾರತ ಪರಿಕಲ್ಪನೆ ಬಹಳಷ್ಟು ಶಕ್ತಿಶಾಲಿಯಾಗಿದ್ದು, ಅದನ್ನು ಅನುಸರಿಸುವ ಪ್ರಯತ್ನ ನಮ್ಮಿಂದ ಆಗಬೇಕು ಎಂದರು.</p>.<p>ಸೋಸಲೆ ವ್ಯಾಸರಾಜ ಮಠದ ವಿದ್ಯಾಶ್ರೀಶತೀರ್ಥ ಶ್ರೀಪಾದರು, ಹಂಪಿ ಮಾತಂಗ ಪರ್ವತ ಪೀಠದ ಪೂರ್ಣಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಎಚ್.ಜಗನ್ನಾಥ ರಾಜುಲಾ ಪ್ರಮಾಣವಚನ ಬೋಧಿಸಿದರು.</p>.<p>ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಪ್ರಮುಖರಾದ ಕಟಗಿ ರಾಮಕೃಷ್ಣ, ಅಯ್ಯಾಳಿ ತಿಮ್ಮಪ್ಪ ಇದ್ದರು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂರಾರು ಮಂದಿ ಸೇರಿದ್ದರು. ರಾಣಿಪೇಟೆಯಿಂದ ವೆಂಕಟೇಶ್ವರ ಕಲ್ಯಾಣ ಮಂಟಪದ ವರೆಗೆ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಹಿಂದೂಗಳಲ್ಲಿನ ಜಾತಿ ತಾರತಮ್ಯ ಮೀರಿ ಎಲ್ಲರೂ ಒಗ್ಗಟ್ಟಿನಿಂದ ಸಾಗಿದಾಗ ಇಡೀ ಜಗತ್ತಿನಲ್ಲೇ ಶಕ್ತಿಶಾಲಿಯಾಗಿ ಬೆಳೆದು ನಿಲ್ಲುವುದು ಸಾಧ್ಯವಿದೆ ಎಂಬುದು ಈಗಾಗಲೇ ಸಾಬೀತಾಗಿದೆ, ಈ ಒಗ್ಗಟ್ಟನ್ನು ಮುರಿಯುವ ಪ್ರಯತ್ನವೂ ನಡೆಯುತ್ತಿದೆ, ಅದಕ್ಕೆ ಫಲ ಸಿಗದು ಎಂದು ಆರ್ಎಸ್ಎಸ್ನ ಆಂಧ್ರ, ತೆಲಂಗಾಣ, ಕರ್ನಟಕ ದಕ್ಷಿಣದ ಬೌದ್ಧಿಕ ಪ್ರಮುಖ ಶ್ರೀಧರಸ್ವಾಮಿ ಹೇಳಿದರು.</p>.<p>ಇಲ್ಲಿ ಗುರುವಾರ ಸಂಜೆ ನಗರಸಭೆಯ ನಾಲ್ಕು ವಾರ್ಡ್ಗಳ ಮಟ್ಟದ ಹಿಂದೂ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಈ ಹಿಂದೆ ಸಹ ನಮ್ಮ ಸಂಪತ್ತನ್ನು ಕೊಳ್ಳೆ ಹೊಡೆಯಲಾಯಿತೇ ಹೊರತು ನಮ್ಮ ಒಗ್ಗಟ್ಟನ್ನು ಮುರಿಯುವುದು ಸಾಧ್ಯವಾಗಿರಲಿಲ್ಲ, ಅದೇ ಪರಂಪರೆ ಮುಂದೆಯೂ ಇರಲಿದೆ, ಹೀಗಾಗಿ ನಮ್ಮ ಏಕತೆಯನ್ನು ತುಳಿಯಲು ಪ್ರಯತ್ನಿಸುವ ನಮ್ಮವರಿಗೆ ನಾವೆಲ್ಲ ನಮ್ಮ ಶಕ್ತಿಯ ಮನವರಿಕೆ ಮಾಡಬೇಕಾಗಿದೆ ಎಂದರು.</p>.<p>ಪಾಶ್ಚಾತ್ಯ ಅನುಕರಣೆಯೇ ನಾವು ಇಂದು ಗಂಭೀರವಾಗಿ ಪರಿಶೀಲಿಸಬೇಕಾದ ವಿಷಯವಾಗಿದ್ದು, ಅದರಿಂದ ವಿಮುಖವಾದರೆ ದೇಶಕ್ಕೆ ಯಾವ ತೊಂದರೆಯೂ ಇರುವುದಿಲ್ಲ. ಈಗಾಗಲೇ ಚಾಲ್ತಿಯಲ್ಲಿರುವ ಸ್ವದೇಶಿ ವಸ್ತುಗಳ ಬಳಕೆ, ಆತ್ಮನಿರ್ಭರ ಭಾರತ ಪರಿಕಲ್ಪನೆ ಬಹಳಷ್ಟು ಶಕ್ತಿಶಾಲಿಯಾಗಿದ್ದು, ಅದನ್ನು ಅನುಸರಿಸುವ ಪ್ರಯತ್ನ ನಮ್ಮಿಂದ ಆಗಬೇಕು ಎಂದರು.</p>.<p>ಸೋಸಲೆ ವ್ಯಾಸರಾಜ ಮಠದ ವಿದ್ಯಾಶ್ರೀಶತೀರ್ಥ ಶ್ರೀಪಾದರು, ಹಂಪಿ ಮಾತಂಗ ಪರ್ವತ ಪೀಠದ ಪೂರ್ಣಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿದರು. ಎಚ್.ಜಗನ್ನಾಥ ರಾಜುಲಾ ಪ್ರಮಾಣವಚನ ಬೋಧಿಸಿದರು.</p>.<p>ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಪ್ರಮುಖರಾದ ಕಟಗಿ ರಾಮಕೃಷ್ಣ, ಅಯ್ಯಾಳಿ ತಿಮ್ಮಪ್ಪ ಇದ್ದರು. ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂರಾರು ಮಂದಿ ಸೇರಿದ್ದರು. ರಾಣಿಪೇಟೆಯಿಂದ ವೆಂಕಟೇಶ್ವರ ಕಲ್ಯಾಣ ಮಂಟಪದ ವರೆಗೆ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>