<p><strong>ಹೊಸಪೇಟೆ (ವಿಜಯನಗರ):</strong> ನಗರದ ಚಿತ್ತವಾಡ್ಗಿ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ.</p><p>ಒಂದನೇ ವಾರ್ಡ್ ಚಿತ್ತವಾಡ್ಗಿ ಕಾಕರ ಓಣಿಯ ಗಂಕಪ್ಪ ಅವರ ಪುತ್ರ ಪರಶುರಾಮ ಮನೆ ಸಮೀಪ ಆಟವಾಡುತ್ತಿದ್ದಾಗ ಒಂದು ನಾಯಿ ದಾಳಿ ನಡೆಸಿ ಆತನ ಕೆನ್ನೆಯ ಮಾಂಸ ಕಚ್ಚಿ ಎಳೆದಿದೆ. ಜತೆಗೆ ಬೆನ್ನು, ಕಾಲಿಗೂ ಗಾಯವಾಗಿದೆ.</p><p>ತಕ್ಷಣ ಬಾಲಕನನ್ನು ಇಲ್ಲಿನ 100 ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p><p><strong>ಬೀದಿನಾಯಿ ಹಾವಳಿ:</strong> ‘ಚಿತ್ತವಾಡ್ಗಿ ಪ್ರದೇಶದಲ್ಲೇ 600ಕ್ಕೂ ಅಧಿಕ ಬೀದಿನಾಯಿಗಳಿವೆ. ಮಕ್ಕಳು, ವಯಸ್ಕರ ಮೇಲೆ ಆಗಾಗ ದಾಳಿ ನಡೆಸುವ ವಿದ್ಯಮಾನ ನಡೆಯುತ್ತಿದ್ದರೂ ಈ ಬಾರಿ ಅದು ವಿಕೋಪಕ್ಕೆ ಹೋಗಿ ಬಾಲಕನಿಗೆ ತೀವ್ರ ಗಾಯವಾಗುವಂತಾಗಿದೆ. ನಗರಸಭೆ ತಕ್ಷಣ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಎಂ.ಸಂತೋಷ್ ಕುಮಾರ್ ಒತ್ತಾಯಿಸಿದರು.</p><p><strong>ಶಾಸಕ ಭೇಟಿ:</strong> ಬಾಲಕ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಶಾಸಕ ಎಚ್.ಆರ್.ಗವಿಯಪ್ಪ ಭೇಟಿ ನೀಡಿ ಬಾಲಕನ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ನಗರದ ಚಿತ್ತವಾಡ್ಗಿ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿನಾಯಿಯೊಂದು ದಾಳಿ ನಡೆಸಿದ್ದು, ಬಾಲಕನ ಕೆನ್ನೆ, ಬೆನ್ನು, ಕಾಲಿಗೆ ಗಂಭೀರ ಗಾಯವಾಗಿದೆ.</p><p>ಒಂದನೇ ವಾರ್ಡ್ ಚಿತ್ತವಾಡ್ಗಿ ಕಾಕರ ಓಣಿಯ ಗಂಕಪ್ಪ ಅವರ ಪುತ್ರ ಪರಶುರಾಮ ಮನೆ ಸಮೀಪ ಆಟವಾಡುತ್ತಿದ್ದಾಗ ಒಂದು ನಾಯಿ ದಾಳಿ ನಡೆಸಿ ಆತನ ಕೆನ್ನೆಯ ಮಾಂಸ ಕಚ್ಚಿ ಎಳೆದಿದೆ. ಜತೆಗೆ ಬೆನ್ನು, ಕಾಲಿಗೂ ಗಾಯವಾಗಿದೆ.</p><p>ತಕ್ಷಣ ಬಾಲಕನನ್ನು ಇಲ್ಲಿನ 100 ಹಾಸಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p><p><strong>ಬೀದಿನಾಯಿ ಹಾವಳಿ:</strong> ‘ಚಿತ್ತವಾಡ್ಗಿ ಪ್ರದೇಶದಲ್ಲೇ 600ಕ್ಕೂ ಅಧಿಕ ಬೀದಿನಾಯಿಗಳಿವೆ. ಮಕ್ಕಳು, ವಯಸ್ಕರ ಮೇಲೆ ಆಗಾಗ ದಾಳಿ ನಡೆಸುವ ವಿದ್ಯಮಾನ ನಡೆಯುತ್ತಿದ್ದರೂ ಈ ಬಾರಿ ಅದು ವಿಕೋಪಕ್ಕೆ ಹೋಗಿ ಬಾಲಕನಿಗೆ ತೀವ್ರ ಗಾಯವಾಗುವಂತಾಗಿದೆ. ನಗರಸಭೆ ತಕ್ಷಣ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಕೆ.ಎಂ.ಸಂತೋಷ್ ಕುಮಾರ್ ಒತ್ತಾಯಿಸಿದರು.</p><p><strong>ಶಾಸಕ ಭೇಟಿ:</strong> ಬಾಲಕ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಶಾಸಕ ಎಚ್.ಆರ್.ಗವಿಯಪ್ಪ ಭೇಟಿ ನೀಡಿ ಬಾಲಕನ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>