ಬಳಿಕ ಪೌರಾಯುಕ್ತ ಮನ್ಸೂರ್ ಅಲಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರದ ಬಹುತೇಕ ಪಾದಚಾರಿ ಮಾರ್ಗಗಳನ್ನು ಕೆಲವರು ಅತಿಕ್ರಮಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ, ದಿನಸಿ, ಹೋಟೆಲ್, ಎಲೆಕ್ಟ್ರಾನಿಕ್ ಸೇರಿದಂತೆ ಇತರೆ ಮಳಿಗೆಗಳನ್ನು ನಿರ್ಮಿಸಿ, ಬೇರೆಯವರಿಗೆ ಬಾಡಿಗೆ ಕೊಟ್ಟು ಹಣ ಗಳಿಸುತ್ತಿದ್ದಾರೆ. ಒಂದೆಡೆ ಪಾದಚಾರಿ ಮಾರ್ಗದ ಒತ್ತುವರಿಯಿಂದ ಜನಸಾಮಾನ್ಯರು ಓಡಾಡಲು ಸಮಸ್ಯೆಯಾಗುತ್ತಿದೆ. ಮುಖ್ಯ ರಸ್ತೆಗಳಲ್ಲೇ ಜನ ಓಡಾಡುತ್ತಿರುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ. ಇನ್ನೊಂದೆಡೆ, ಕೆಲವರು ಇದನ್ನೇ ಹಣ ಗಳಿಸುವ ದಂದೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.