‘ಕನ್ನಡ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಬಡ, ಪರಿಶಿಷ್ಟ, ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಫೆಲೋಶಿಪ್ ನೆಚ್ಚಿಕೊಂಡೇ ಸಂಶೋಧನೆಗೆ ಪ್ರವೇಶ ಪಡೆದಿರುತ್ತಾರೆ. ಆದರೆ, ವಿ.ವಿ. ಆಡಳಿತವು ಸರ್ಕಾರದಿಂದ ಫೆಲೋಶಿಪ್ ಬಂದರೂ ನೀಡುತ್ತಿಲ್ಲ. ಸರ್ಕಾರದಿಂದ ಅನುದಾನ ಬಂದಿಲ್ಲ ಎಂದು ಹೇಳುತ್ತಿದೆ. ಸರ್ಕಾರದ ಉನ್ನತ ಸ್ಥಾನದಲ್ಲಿರುವ ರಾಜ್ಯಪಾಲರು, ಮುಖ್ಯಮಂತ್ರಿಯವರಿಗೆ ಈ ಸಂಬಂಧ ಮನವಿ ಸಲ್ಲಿಸಲಾಗಿತ್ತು. ದೊಡ್ಡಬಸಪ್ಪ ವಿದ್ಯಾರ್ಥಿ ಮುಖಂಡ ಆಗಿರುವುದರಿಂದ ಅವರು ನೇತೃತ್ವ ವಹಿಸಿದ್ದರು. ಇದರಲ್ಲಿ ದುರ್ವರ್ತನೆಯ ಪ್ರಶ್ನೆ ಎಲ್ಲಿಂದ ಬಂತು? ವಿದ್ಯಾರ್ಥಿಗಳ ಬಾಯಿ ಮುಚ್ಚಿಸುವ ಹುನ್ನಾರ ಇದರಲ್ಲಿ ಅಡಗಿದೆ’ ಎಂದು ವಿದ್ಯಾರ್ಥಿಗಳು ಆರೋಪಿಸಿದರು.