ನೂರು ಹಾಸಿಗೆ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ಪ್ರಿಯಾಂಕಾ, ಮಕ್ಕಳ ತಜ್ಞೆ ಡಾ.ಶ್ರೀನಿವಾಸ ಅವರ ಕಾಳಜಿಯಿಂದಾಗಿ ಈವರೆಗೆ ಯಾವುದೇ ಶಿಶುವಿಗೂ ಸೋಂಕು ತಗುಲಿಲ್ಲ. ತಾಯಂದಿರು, ಶಿಶುಗಳು ಆರೋಗ್ಯವಾಗಿದ್ದಾರೆ. ‘ಆಸ್ಪತ್ರೆಯಲ್ಲಿ ಸ್ವಚ್ಛತೆ ಸೇರಿದಂತೆ ಇತರೆ ಸುರಕ್ಷತಾ ಕ್ರಮಗಳಿಂದಾಗಿ ತಾಯಂದಿರಿಂದ ಮಕ್ಕಳಿಗೆ ಸೋಂಕು ಹರಡಿಲ್ಲ. ಸೋಂಕು ದೃಢಪಟ್ಟ ತಾಯಂದಿರು ಕೂಡ ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ’ ಎಂದು ವೈದ್ಯರು ಹೇಳಿದ್ದಾರೆ.