<p><strong>ಹೊಸಪೇಟೆ (ವಿಜಯನಗರ):</strong> ಕಾಂಗ್ರೆಸ್ ನಾಯಕಿ ರಾಣಿ ಸಂಯುಕ್ತಾ ಅವರು ಹಗರಿಬೊಮ್ಮನಹಳ್ಳಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿರುವುದಕ್ಕೆ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ ಅಭಿನಂದನೆ ಸಲ್ಲಿಸಿದೆ.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಘದ ವತಿಯಿಂದ ಮಾರ್ಚ್ 12ರಂದು ಹಂಪಿಯಿಂದ ನಗರದವರೆಗೆ ಸಕ್ಕರೆ ಕಾರ್ಖಾನೆಗಾಗಿ ಕಾಲ್ನಡಿಗೆ ಜಾಥಾ ನಡೆಸಲಾಗಿತ್ತು. ಅದಕ್ಕೆ ಫಲ ದೊರೆತಂತಾಗಿದೆ ಎಂದರು.</p>.<p>‘ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೆಂಚನಬಂಡಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸಿದರೂ ಹೊಸಪೇಟೆ ನಗರದಲ್ಲಿ ಕಬ್ಬು ಸಂಗ್ರಹಣಾ ಕೇಂದ್ರ ತೆರೆದು ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡುವುದಾಗಿ ತಿಳಿಸಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ರಾಣಿ ಸಂಯುಕ್ತ ಅವರ ಪ್ರಯತ್ನಕ್ಕೆ ಸಂಘದ ಸಂಪೂರ್ಣ ಬೆಂಬಲ ಇದೆ. ಇತರ ಯಾರಾದರೂ ಹೊಸಪೇಟೆ ಸುತ್ತಮುತ್ತಲಲ್ಲೇ ಸಕ್ಕರೆ ಕಾರ್ಖಾನೆ ನಿರ್ಮಿಸಿದರೆ ಅವರಿಗೂ ಸಂಘದ ಬೆಂಬಲ ಇರುತ್ತದೆ’ ಎಂದು ಹೇಳಿದರು.</p>.<p>ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ಎ.ಖಾದ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿಬಸವರಾಜ ಎಂ., ಮಹಿಳಾ ಘಟಕದ ಅಧ್ಯಕ್ಷೆ ಎಂ.ರತ್ನಮ್ಮ, ರಾಜ್ಯ ಉಪಾಧ್ಯಕ್ಷೆ ವಿ.ಉಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಕಾಂಗ್ರೆಸ್ ನಾಯಕಿ ರಾಣಿ ಸಂಯುಕ್ತಾ ಅವರು ಹಗರಿಬೊಮ್ಮನಹಳ್ಳಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಮುಂದಾಗಿರುವುದಕ್ಕೆ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘ ಅಭಿನಂದನೆ ಸಲ್ಲಿಸಿದೆ.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಅವರು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಘದ ವತಿಯಿಂದ ಮಾರ್ಚ್ 12ರಂದು ಹಂಪಿಯಿಂದ ನಗರದವರೆಗೆ ಸಕ್ಕರೆ ಕಾರ್ಖಾನೆಗಾಗಿ ಕಾಲ್ನಡಿಗೆ ಜಾಥಾ ನಡೆಸಲಾಗಿತ್ತು. ಅದಕ್ಕೆ ಫಲ ದೊರೆತಂತಾಗಿದೆ ಎಂದರು.</p>.<p>‘ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕೆಂಚನಬಂಡಿ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸಿದರೂ ಹೊಸಪೇಟೆ ನಗರದಲ್ಲಿ ಕಬ್ಬು ಸಂಗ್ರಹಣಾ ಕೇಂದ್ರ ತೆರೆದು ಈ ಭಾಗದ ರೈತರಿಗೆ ಅನುಕೂಲ ಮಾಡಿಕೊಡುವುದಾಗಿ ತಿಳಿಸಲಾಗಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ. ರಾಣಿ ಸಂಯುಕ್ತ ಅವರ ಪ್ರಯತ್ನಕ್ಕೆ ಸಂಘದ ಸಂಪೂರ್ಣ ಬೆಂಬಲ ಇದೆ. ಇತರ ಯಾರಾದರೂ ಹೊಸಪೇಟೆ ಸುತ್ತಮುತ್ತಲಲ್ಲೇ ಸಕ್ಕರೆ ಕಾರ್ಖಾನೆ ನಿರ್ಮಿಸಿದರೆ ಅವರಿಗೂ ಸಂಘದ ಬೆಂಬಲ ಇರುತ್ತದೆ’ ಎಂದು ಹೇಳಿದರು.</p>.<p>ಸಂಘದ ರಾಜ್ಯ ಉಪಾಧ್ಯಕ್ಷ ಎಸ್.ಎ.ಖಾದ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕರಿಬಸವರಾಜ ಎಂ., ಮಹಿಳಾ ಘಟಕದ ಅಧ್ಯಕ್ಷೆ ಎಂ.ರತ್ನಮ್ಮ, ರಾಜ್ಯ ಉಪಾಧ್ಯಕ್ಷೆ ವಿ.ಉಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>