ನವದೆಹಲಿಯ ದೀನ್ ದಯಾಳ್ ಸಂಶೋಧನಾ ಸಂಸ್ಥೆ, ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ದೇಶದ ಹೆಸರಾಂತ ಜಲತಜ್ಞರು ಭಾಗವಹಿಸುವರು. ಎಲ್ಲ ಗೋಷ್ಠಿಗಳು, ಚರ್ಚೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜಲದ ಕುರಿತಾಗಿಯೇ ಇರಲಿವೆ ಎಂದು ವಿವರಿಸಿದರು.