<p><strong>ಹಗರಿಬೊಮ್ಮನಹಳ್ಳಿ:</strong> ‘ಸುಪ್ರೀಂ ಕೋರ್ಟ್ ಒಳಮೀಸಲಾತಿ ಕುರಿತು ನೀಡಿರುವ ತೀರ್ಪು ಸಂವಿಧಾನದ ಸಮಾನತೆಯ ಆಶಯವಾಗಿದೆ. ಇದರಿಂದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ಅನ್ವಯ ಸೌಲಭ್ಯಗಳು ದೊರೆಯುತ್ತವೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ ಹೇಳಿದರು.</p>.<p>ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಒಳಮೀಸಲಾತಿ ಜಾರಿ ವಿಜಯೋತ್ಸವದ ನೇತೃತ್ವವಹಿಸಿ ಅವರು ಮಾತನಾಡಿದರು.</p>.<p>‘30 ವರ್ಷಗಳ ಒಳಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಂಡಿದೆ. ಕಾಂಗ್ರೆಸ್ ಈ ಹಿಂದೆ ಪರಿಶಿಷ್ಟರ ಬೇಡಿಕೆ ಈಡೇರಿಸುವುದಾಗಿ ಬರೀ ಭರವಸೆ ನೀಡುತ್ತಲೇ ಬಂದಿತ್ತು. ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ, ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಒಳಮೀಸಲಾತಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಬೆಣ್ಣೆಕಲ್ಲು ಪ್ರಕಾಶ್, ಎಸ್ಸಿ ಮೋರ್ಚಾದ ಅಧ್ಯಕ್ಷ ಮರಿಯಪ್ಪ, ಮಾದೂರು ಮಹೇಶ್ ಮಾತನಾಡಿದರು. ಮುಖಂಡರಾದ ಎಚ್.ಬಸಪ್ಪ, ಉಪ್ಪಾರಗಟ್ಟಿ ಬುಳ್ಳಪ್ಪ, ಗಾಳೆಪ್ಪ, ಆನಂದ್, ರಮೇಶ್, ಮಂಜುನಾಥ, ನಾಗಪ್ಪ, ಸುಬ್ರಮಣ್ಯ, ಹನುಮಂತಪ್ಪ ಇದ್ದರು.</p>.<p>ಬಿಜೆಪಿ ಕಚೇರಿಯಲ್ಲಿ ಪೂಜೆ ಸಲ್ಲಿಸಿ, ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ:</strong> ‘ಸುಪ್ರೀಂ ಕೋರ್ಟ್ ಒಳಮೀಸಲಾತಿ ಕುರಿತು ನೀಡಿರುವ ತೀರ್ಪು ಸಂವಿಧಾನದ ಸಮಾನತೆಯ ಆಶಯವಾಗಿದೆ. ಇದರಿಂದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ಅನ್ವಯ ಸೌಲಭ್ಯಗಳು ದೊರೆಯುತ್ತವೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ ಹೇಳಿದರು.</p>.<p>ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಒಳಮೀಸಲಾತಿ ಜಾರಿ ವಿಜಯೋತ್ಸವದ ನೇತೃತ್ವವಹಿಸಿ ಅವರು ಮಾತನಾಡಿದರು.</p>.<p>‘30 ವರ್ಷಗಳ ಒಳಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಕಂಡಿದೆ. ಕಾಂಗ್ರೆಸ್ ಈ ಹಿಂದೆ ಪರಿಶಿಷ್ಟರ ಬೇಡಿಕೆ ಈಡೇರಿಸುವುದಾಗಿ ಬರೀ ಭರವಸೆ ನೀಡುತ್ತಲೇ ಬಂದಿತ್ತು. ಸಾಮಾಜಿಕ ನ್ಯಾಯದ ಪರಿಕಲ್ಪನೆ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ, ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಒಳಮೀಸಲಾತಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಬೆಣ್ಣೆಕಲ್ಲು ಪ್ರಕಾಶ್, ಎಸ್ಸಿ ಮೋರ್ಚಾದ ಅಧ್ಯಕ್ಷ ಮರಿಯಪ್ಪ, ಮಾದೂರು ಮಹೇಶ್ ಮಾತನಾಡಿದರು. ಮುಖಂಡರಾದ ಎಚ್.ಬಸಪ್ಪ, ಉಪ್ಪಾರಗಟ್ಟಿ ಬುಳ್ಳಪ್ಪ, ಗಾಳೆಪ್ಪ, ಆನಂದ್, ರಮೇಶ್, ಮಂಜುನಾಥ, ನಾಗಪ್ಪ, ಸುಬ್ರಮಣ್ಯ, ಹನುಮಂತಪ್ಪ ಇದ್ದರು.</p>.<p>ಬಿಜೆಪಿ ಕಚೇರಿಯಲ್ಲಿ ಪೂಜೆ ಸಲ್ಲಿಸಿ, ಆವರಣದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>