<p><strong>ಹರಪನಹಳ್ಳಿ:</strong> ಸಮೀಕ್ಷೆಯಿಂದ ಹೊರಗುಳಿದ ಮಹಿಳೆಯರು ಮತ್ತು ಅವಲಂಬಿತ ಕುಟುಂಬ ಸದಸ್ಯರನ್ನು ದೇವದಾಸಿ ಸಮೀಕ್ಷಾ ಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಳಿಕ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ದೇವದಾಸಿ ಮಹಿಳೆಯರಿಗೆ ವಯಸ್ಸಿನ ಮಿತಿಯಿಲ್ಲದೇ ಸಮೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷೆ ಟಿ.ವಿ.ರೇಣುಕಮ್ಮ ಮಾತನಾಡಿ, ತಾಲ್ಲೂಕಿಗೊಬ್ಬ ಯೋಜನೆ ಅನುಷ್ಠಾನಾಧಿಕಾರಿ ನೇಮಿಸಬೇಕು. ಸಮೀಕ್ಷೆಗೆ ವಿಧಿಸಿರುವ ವಯಸ್ಸಿನ ಮಿತಿ ತೆಗೆದು ಹಾಕಬೇಕು. ಮಾಸಿಕ ಸಹಾಯಧನ ₹ 3 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕು ಅಧ್ಯಕ್ಷೆ ಈರಮ್ಮ, ಮುಖಂಡರಾದ ಹುಲಿಕಟ್ಟೆ ರಹಮತ್ ವುಲ್ಲಾ, ಹನುಮಕ್ಕ, ಮುತ್ತಮ್ಮ, ಗಂಗಮ್ಮ, ಕವಿತಾ, ಮೈಲಮ್ಮ, ಕೆಂಚಮ್ಮ, ಗೌರಮ್ಮ, ರೇಣುಕಮ್ಮ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಸಮೀಕ್ಷೆಯಿಂದ ಹೊರಗುಳಿದ ಮಹಿಳೆಯರು ಮತ್ತು ಅವಲಂಬಿತ ಕುಟುಂಬ ಸದಸ್ಯರನ್ನು ದೇವದಾಸಿ ಸಮೀಕ್ಷಾ ಪಟ್ಟಿಗೆ ಸೇರಿಸಬೇಕು ಎಂದು ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ, ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಬಳಿಕ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಅವರಿಗೆ ಮನವಿ ಸಲ್ಲಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಕಚೇರಿ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ದೇವದಾಸಿ ಮಹಿಳೆಯರಿಗೆ ವಯಸ್ಸಿನ ಮಿತಿಯಿಲ್ಲದೇ ಸಮೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷೆ ಟಿ.ವಿ.ರೇಣುಕಮ್ಮ ಮಾತನಾಡಿ, ತಾಲ್ಲೂಕಿಗೊಬ್ಬ ಯೋಜನೆ ಅನುಷ್ಠಾನಾಧಿಕಾರಿ ನೇಮಿಸಬೇಕು. ಸಮೀಕ್ಷೆಗೆ ವಿಧಿಸಿರುವ ವಯಸ್ಸಿನ ಮಿತಿ ತೆಗೆದು ಹಾಕಬೇಕು. ಮಾಸಿಕ ಸಹಾಯಧನ ₹ 3 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕು ಅಧ್ಯಕ್ಷೆ ಈರಮ್ಮ, ಮುಖಂಡರಾದ ಹುಲಿಕಟ್ಟೆ ರಹಮತ್ ವುಲ್ಲಾ, ಹನುಮಕ್ಕ, ಮುತ್ತಮ್ಮ, ಗಂಗಮ್ಮ, ಕವಿತಾ, ಮೈಲಮ್ಮ, ಕೆಂಚಮ್ಮ, ಗೌರಮ್ಮ, ರೇಣುಕಮ್ಮ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>