<p><strong>ಹೊಸಪೇಟೆ(ವಿಜಯನಗರ):</strong> ‘ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕೌಶಲ ಅಗತ್ಯ. ಅದರ ಕಲಿಕೆಗೆ ಟ್ಯಾಬ್ ಸಹಕಾರಿಯಾಗಿದೆ. ಹೀಗಾಗಿಯೇ ಸರ್ಕಾರ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುತ್ತಿದೆ’ ಎಂದು ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ಕನಕೇಶಮೂರ್ತಿ ತಿಳಿಸಿದರು.</p>.<p>ಬುಧವಾರ ನಗರದಲ್ಲಿ ಕಾಲೇಜಿನಲ್ಲಿ ಸಾಂಕೇತಿಕವಾಗಿ ಹತ್ತು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ವಿತರಿಸಲಾಗಿತ್ತು, ಪ್ರಸಕ್ತ ಸಾಲಿನ ಪ್ರಥಮ ವರ್ಷದ 862 ಜನ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. ಟ್ಯಾಬ್ ಪಡೆದುಕೊಳ್ಳುವ ಫಲಾನುಭವಿ ವಿದ್ಯಾರ್ಥಿಗಳು ಜಾಗರೂಕತೆಯಿಂದ ಬಳಸಿಕೊಳ್ಳಿ, ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಂಡರೆ ಸೈಬರ್ ಅಪರಾಧ ಆಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಶೈಕ್ಷಣಿಕ ಉದ್ದೇಶಕ್ಕಾಗಿ ಟ್ಯಾಬ್ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಟ್ಯಾಬ್ ಮಾತ್ರವಲ್ಲದೇ ಜಿಲ್ಲಾ ಖನಿಜ ನಿಧಿಯಿಂದ ಕಾಲೇಜಿನಲ್ಲಿ 12 ಸ್ಮಾರ್ಟ್ ಹಾಗೂ 3 ಡಿಜಿಟಲ್ ತರಗತಿಗಳನ್ನು ಆರಂಭಿಸಲಾಗಿದೆ. ಕಲಬುರ್ಗಿ ವಿಭಾಗದಲ್ಲಿ ಡಿಜಿಟಲ್ ತರಗತಿ ಹೊಂದಿದ ಮೊದಲ ಕಾಲೇಜು ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಪರಿಶ್ರಮ ಇದೆ’ ಎಂದರು.</p>.<p>ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ‘ಶಿಕ್ಷಣ ವ್ಯವಸ್ಥೆ ಅಧುನಿಕ ತಂತ್ರಜ್ಞಾನದೊಂದಿಗೆ ಮುಂದುವರಿಯುತ್ತಿದೆ. ವಿದ್ಯಾರ್ಥಿಗಳು ಇದರ ಸೂಕ್ತ ಪ್ರಯೋಜನ ಪಡೆಯಬೇಕು. ನೂತನ ಶಿಕ್ಷಣ ನೀತಿ ಜಾರಿಯಾಗಲಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಯಾಗಲಿದೆ’ ಎಂದು ತಿಳಿಸಿದರು.</p>.<p>ಯುವ ಮುಖಂಡ ಸಂದೀಪ್ ಸಿಂಗ್, ಪ್ರಾಧ್ಯಾಪಕರಾದ ನಟರಾಜ್ ಪಾಟೀಲ, ಬಸವರಾಜ್, ಗಡಿಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ(ವಿಜಯನಗರ):</strong> ‘ಆಧುನಿಕ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕೌಶಲ ಅಗತ್ಯ. ಅದರ ಕಲಿಕೆಗೆ ಟ್ಯಾಬ್ ಸಹಕಾರಿಯಾಗಿದೆ. ಹೀಗಾಗಿಯೇ ಸರ್ಕಾರ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುತ್ತಿದೆ’ ಎಂದು ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಿ.ಜಿ. ಕನಕೇಶಮೂರ್ತಿ ತಿಳಿಸಿದರು.</p>.<p>ಬುಧವಾರ ನಗರದಲ್ಲಿ ಕಾಲೇಜಿನಲ್ಲಿ ಸಾಂಕೇತಿಕವಾಗಿ ಹತ್ತು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸುವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ವಿತರಿಸಲಾಗಿತ್ತು, ಪ್ರಸಕ್ತ ಸಾಲಿನ ಪ್ರಥಮ ವರ್ಷದ 862 ಜನ ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸಲಾಗುತ್ತದೆ. ಟ್ಯಾಬ್ ಪಡೆದುಕೊಳ್ಳುವ ಫಲಾನುಭವಿ ವಿದ್ಯಾರ್ಥಿಗಳು ಜಾಗರೂಕತೆಯಿಂದ ಬಳಸಿಕೊಳ್ಳಿ, ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಂಡರೆ ಸೈಬರ್ ಅಪರಾಧ ಆಗುತ್ತದೆ’ ಎಂದು ಎಚ್ಚರಿಸಿದರು.</p>.<p>‘ಶೈಕ್ಷಣಿಕ ಉದ್ದೇಶಕ್ಕಾಗಿ ಟ್ಯಾಬ್ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಟ್ಯಾಬ್ ಮಾತ್ರವಲ್ಲದೇ ಜಿಲ್ಲಾ ಖನಿಜ ನಿಧಿಯಿಂದ ಕಾಲೇಜಿನಲ್ಲಿ 12 ಸ್ಮಾರ್ಟ್ ಹಾಗೂ 3 ಡಿಜಿಟಲ್ ತರಗತಿಗಳನ್ನು ಆರಂಭಿಸಲಾಗಿದೆ. ಕಲಬುರ್ಗಿ ವಿಭಾಗದಲ್ಲಿ ಡಿಜಿಟಲ್ ತರಗತಿ ಹೊಂದಿದ ಮೊದಲ ಕಾಲೇಜು ಎಂಬ ಹೆಗ್ಗಳಿಕೆ ನಮ್ಮದಾಗಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಪರಿಶ್ರಮ ಇದೆ’ ಎಂದರು.</p>.<p>ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ‘ಶಿಕ್ಷಣ ವ್ಯವಸ್ಥೆ ಅಧುನಿಕ ತಂತ್ರಜ್ಞಾನದೊಂದಿಗೆ ಮುಂದುವರಿಯುತ್ತಿದೆ. ವಿದ್ಯಾರ್ಥಿಗಳು ಇದರ ಸೂಕ್ತ ಪ್ರಯೋಜನ ಪಡೆಯಬೇಕು. ನೂತನ ಶಿಕ್ಷಣ ನೀತಿ ಜಾರಿಯಾಗಲಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಯಾಗಲಿದೆ’ ಎಂದು ತಿಳಿಸಿದರು.</p>.<p>ಯುವ ಮುಖಂಡ ಸಂದೀಪ್ ಸಿಂಗ್, ಪ್ರಾಧ್ಯಾಪಕರಾದ ನಟರಾಜ್ ಪಾಟೀಲ, ಬಸವರಾಜ್, ಗಡಿಗೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>