ಹೊಸಪೇಟೆ (ವಿಜಯನಗರ): ಕಾರಿನಲ್ಲಿದ್ದ 20 ತೊಲೆ ಚಿನ್ನಾಭರಣ, ₹80 ಸಾವಿರ ನಗದು ಹಣವನ್ನು ಪೊಲೀಸರು ನಗರದ ಟಿ.ಬಿ. ಡ್ಯಾಂ ಸಮೀಪದ ಗಣೇಶ ಗುಡಿ ಚೆಕ್ಪೋಸ್ಟ್ನಲ್ಲಿ ಭಾನುವಾರ ವಶಪಡಿಸಿಕೊಂಡಿದ್ದಾರೆ.
‘ಮಂತ್ರಾಲಯದಿಂದ ಬೆಂಗಳೂರಿನ ಕಡೆಗೆ ಕಾರು ಹೋಗುತ್ತಿತ್ತು. ಅದನ್ನು ತಡೆದು ಪರಿಶೀಲಿಸಿದಾಗ ದಾಖಲೆಗಳಿಲ್ಲದ 20 ತೊಲೆ ಬಂಗಾರ, ₹80 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಚಿನ್ನಾಭರಣಗಳ ಮೌಲ್ಯ ಸರಿಸುಮಾರು ₹11 ಲಕ್ಷ ಅಂದಾಜಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.