<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯ 114 ಡಣಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿಯನ್ನು ಶುಕ್ರವಾರವೇ ಅಮಾನತುಗೊಳಿಸುವುದಾಗಿ ಡಿಡಿಪಿಐ ಅವರು ತಹಶೀಲ್ದಾರ್ ಅವರಿಗೆ ಭರವಸೆ ನೀಡಿದ ಮೇರೆಗೆ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ಕೊನೆಗೊಳಿಸಿದರು.</p><p>ಬೆಳಿಗ್ಗೆ 11.30ರ ಸುಮಾರಿಗೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ.ಎಂ.ಶ್ರುತಿ ಅವರು ವಿದ್ಯಾರ್ಥಿಗಳು, ಪೋಷಕರ ಜತೆಗೆ ಚರ್ಚಿಸಿ, ಅವರ ಅಹವಾಲು ಆಲಿಸಿದರು. ತಕ್ಷಣ ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಅವರ ಜತೆಗೆ ಫೋನ್ನಲ್ಲಿ ಮಾತನಾಡಿದರು.</p><p>‘ಊರವರು ದೂರು ನೀಡಿದ್ದಾರೆ, ಶುಕ್ರವಾರವೇ ಶಿಕ್ಷಕಿಯನ್ನು ಅಮಾನತುಗೊಳಿಸಲಾಗುವುದು’ ಎಂದು ಡಿಡಿಪಿಐ ಅವರು ತಹಶೀಲ್ದಾರ್ ಅವರಿಗೆ ಭರವಸೆ ನೀಡಿದರು.</p><p>ಬಳಿಕ ತಹಶೀಲ್ದಾರ್ ಅವರು ಎಲ್ಲರನ್ನೂ ಸಮಾಧಾನಪಡಿಸಿ, ತಾವೇ ದ್ವಾರದ ಬೀಗ ತೆಗೆದು ಎಲ್ಲರನ್ನೂ ಶಾಲಾ ಆವರಣದೊಳಕ್ಕೆ ಕಳುಹಿಸಿಕೊಟ್ಟರು. ಬಳಿಕ ಕೊಠಡಿ ಬಾಗಿಲು ತೆರೆದು ಎಂದಿನಂತೆ ತರಗತಿಗಳು ಆರಂಭವಾದವು.</p>.ಶಿಕ್ಷಕಿ ವರ್ಗಾವಣೆಗೆ ಆಗ್ರಹ: ಶಾಲೆಗೆ ಬೀಗ; ವಿದ್ಯಾರ್ಥಿಗಳು, ಪೋಷಕರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯ 114 ಡಣಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕಿಯನ್ನು ಶುಕ್ರವಾರವೇ ಅಮಾನತುಗೊಳಿಸುವುದಾಗಿ ಡಿಡಿಪಿಐ ಅವರು ತಹಶೀಲ್ದಾರ್ ಅವರಿಗೆ ಭರವಸೆ ನೀಡಿದ ಮೇರೆಗೆ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ಕೊನೆಗೊಳಿಸಿದರು.</p><p>ಬೆಳಿಗ್ಗೆ 11.30ರ ಸುಮಾರಿಗೆ ಸ್ಥಳಕ್ಕೆ ಬಂದ ತಹಶೀಲ್ದಾರ್ ಎಂ.ಎಂ.ಶ್ರುತಿ ಅವರು ವಿದ್ಯಾರ್ಥಿಗಳು, ಪೋಷಕರ ಜತೆಗೆ ಚರ್ಚಿಸಿ, ಅವರ ಅಹವಾಲು ಆಲಿಸಿದರು. ತಕ್ಷಣ ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಅವರ ಜತೆಗೆ ಫೋನ್ನಲ್ಲಿ ಮಾತನಾಡಿದರು.</p><p>‘ಊರವರು ದೂರು ನೀಡಿದ್ದಾರೆ, ಶುಕ್ರವಾರವೇ ಶಿಕ್ಷಕಿಯನ್ನು ಅಮಾನತುಗೊಳಿಸಲಾಗುವುದು’ ಎಂದು ಡಿಡಿಪಿಐ ಅವರು ತಹಶೀಲ್ದಾರ್ ಅವರಿಗೆ ಭರವಸೆ ನೀಡಿದರು.</p><p>ಬಳಿಕ ತಹಶೀಲ್ದಾರ್ ಅವರು ಎಲ್ಲರನ್ನೂ ಸಮಾಧಾನಪಡಿಸಿ, ತಾವೇ ದ್ವಾರದ ಬೀಗ ತೆಗೆದು ಎಲ್ಲರನ್ನೂ ಶಾಲಾ ಆವರಣದೊಳಕ್ಕೆ ಕಳುಹಿಸಿಕೊಟ್ಟರು. ಬಳಿಕ ಕೊಠಡಿ ಬಾಗಿಲು ತೆರೆದು ಎಂದಿನಂತೆ ತರಗತಿಗಳು ಆರಂಭವಾದವು.</p>.ಶಿಕ್ಷಕಿ ವರ್ಗಾವಣೆಗೆ ಆಗ್ರಹ: ಶಾಲೆಗೆ ಬೀಗ; ವಿದ್ಯಾರ್ಥಿಗಳು, ಪೋಷಕರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>