ಹೊಸಪೇಟೆ (ವಿಜಯನಗರ): ಹಂಪಿ ವಿರೂಪಾಕ್ಷ ದೇವಸ್ಥಾನ ಸಮೀಪದ ಹೇಮಕೂಟ ಇಳಿಜಾರು ರಸ್ತೆಯಲ್ಲಿ ಸೋಮವಾರ ಸಂಜೆ ಟೆಂಪೊ ಟ್ರಾವೆಲರ್ ಒಂದು ರಸ್ತೆಯ ಮೇಲೆ ಏರುತ್ತಿದ್ದಾಗ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಹಿಂದಕ್ಕೆ ಚಲಿಸಿ, ಕೆಕೆಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದು 12 ಅಡಿ ಆಳಕ್ಕೆ ಉರುಳಿ ಬಿದ್ದಿದ್ದು, ಒಬ್ಬರಿಗೆ ಗಾಯವಾಗಿದೆ.
ವಾಹನದಲ್ಲಿ ರಾಯಚೂರಿನ 14 ಮಂದಿ ಪ್ರವಾಸಿಗರಿದ್ದರು. ಹಂಪಿ ನೋಡಿಕೊಂಡು ತಮ್ಮ ಊರಿಗೆ ವಾಪಸಾಗುತ್ತಿದ್ದ ವೇಳೆ ವಿರೂಪಾಕ್ಷ ದೇವಸ್ಥಾನದ ವಾಹನ ನಿಲುಗಡೆ ಸ್ಥಳದಿಂದ ಹೊರಟ ಕೆಲವೇ ಕ್ಷಣದಲ್ಲಿ ಈ ಅಪಘಾತ ಸಂಭವಿಸಿತು.
ಸಂಜೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿತು. ಹೊಸ ವರ್ಷದ ಪ್ರಯುಕ್ತ ಭಾರಿ ಸಂಖ್ಯೆಯಲ್ಲಿ ಬಂದಿದ್ದ ಪ್ರವಾಸಿಗರು ಹಂಪಿಯಿಂದ ವಾಸಸಾಗುತ್ತಿದ್ದಾಗಲೇ ವಾಹನ ಉರುಳಿ ಬಿದ್ದುದರಿಂದ ಸ್ವಲ್ಪ ಸಮಯ ಸಂಚಾರ ದಟ್ಟಣೆ ಉಂಟಾಯಿತು. ತಕ್ಷಣ ಧಾವಿಸಿದ ಪೊಲೀಸರು ಸಂಚಾರ ದಟ್ಟಣೆ ನಿವಾರಿಸಿದರು ಹಾಗೂ ಗಾಯಗೊಂಡ ಒಬ್ಬನನ್ನು ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು.