<p><strong>ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ಆಲೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟೆಂಪೊ ಟ್ರಾವೆಕರ್ ವಾಹನ ಡಿಕ್ಕಿ ಹೊಡೆದುದರಿಂದ ವೃದ್ಧರೊಬ್ಬರು ಮೃತಪಟ್ಟಿದ್ದು, ಚಾಲಕ ಸಹಿತ 15 ಮಂದಿ ಗಾಯಗೊಂಡಿದ್ದಾರೆ.</p><p>ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಆರೂಡಿ ಗ್ರಾಮದ ನಿವೃತ್ತ ಕಂಡಕ್ಟರ್ ರಾಮಕೃಷ್ಣಯ್ಯ (68) ಮೃತರು.</p>.ಪೋಶೆ ಕಾರು ಅಪಘಾತ: ಬಾಲಕನನ್ನು ಕೂಡಲೇ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶ.<p>ಗಾಯಗೊಂಡವರನ್ನು ಆರೂಡಿ ಗ್ರಾಮದ ಲಕ್ಷ್ಮಿ ನರಸಪ್ಪ, ಶಾರದಮ್ಮ, ಸುಂದರ್ ಕುಮಾರ್, ಜಯಶ್ರೀ, ಆರಾಧ್ಯ, ಅನನ್ಯ, ಭೀಮಾಶಂಕರ, ನಾಗರತ್ನ, ಎಲ್. ಗಾಯತ್ರಮ್ಮ, ಕೆ.ಎಲ್.ಗಾಯತ್ರಮ್ಮ, ಮಂಜುಳ, ನರಸಿಂಹರಾಜ ಚಾಲಕ), ಜಯರಾಮರೆಡ್ಡಿ, ನಾಗರಾಜ, ಮರಿಯಮ್ಮ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಮಕ್ಕಳಿದ್ದಾರೆ.</p><p> ಟಿ ಟಿ ವಾಹನವು ಕಲಬುರಗಿಯಿಂದ ಆರೋಡಿ ಗ್ರಾಮಕ್ಕೆ ತೆರಳುತ್ತಿತ್ತು. ಕಲಬರುಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಸ್ವಗ್ರಾಮ ತೆರಳುವಾಗ ಅಪಘಾತವಾಗಿದೆ.</p>.ದಾವಣಗೆರೆಯಲ್ಲಿ ಭೀಕರ ಅಪಘಾತ: ಶ್ರೀರಾಮ ಸೇನೆ ಮುಖಂಡ ಸೇರಿ ಇಬ್ಬರ ಸ್ಥಿತಿ ಗಂಭೀರ. <p> ಗಂಗಾವತಿಯಿಂದ ಮೈಸೂರಿಗೆ ಹೊರಟಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ನಸುಕಿನ 2.40ರ ವೇಳೆ ಲಾರಿಗೆ ಟಿ ಟಿ ಗಾಡಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.</p><p>ಡಿಕ್ಕಿಯ ರಭಸಕ್ಕೆ ಟಿಟಿ ವಾಹನವು ನಜ್ಜುಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಅವರನ್ನು ಹೊರ ತೆಗೆಯಲು ಪೊಲೀಸರು, ಟೋಲ್ ಸಿಬ್ಬಂದಿ ಹರಸಾಹಸಪಟ್ಟರು. </p><p>ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p> .ಚಿಂತಾಮಣಿ | ಶಾಲಾ ವಾಹನ ಅಪಘಾತ: 7 ವಿದ್ಯಾರ್ಥಿಗಳಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ಆಲೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟೆಂಪೊ ಟ್ರಾವೆಕರ್ ವಾಹನ ಡಿಕ್ಕಿ ಹೊಡೆದುದರಿಂದ ವೃದ್ಧರೊಬ್ಬರು ಮೃತಪಟ್ಟಿದ್ದು, ಚಾಲಕ ಸಹಿತ 15 ಮಂದಿ ಗಾಯಗೊಂಡಿದ್ದಾರೆ.</p><p>ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಆರೂಡಿ ಗ್ರಾಮದ ನಿವೃತ್ತ ಕಂಡಕ್ಟರ್ ರಾಮಕೃಷ್ಣಯ್ಯ (68) ಮೃತರು.</p>.ಪೋಶೆ ಕಾರು ಅಪಘಾತ: ಬಾಲಕನನ್ನು ಕೂಡಲೇ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶ.<p>ಗಾಯಗೊಂಡವರನ್ನು ಆರೂಡಿ ಗ್ರಾಮದ ಲಕ್ಷ್ಮಿ ನರಸಪ್ಪ, ಶಾರದಮ್ಮ, ಸುಂದರ್ ಕುಮಾರ್, ಜಯಶ್ರೀ, ಆರಾಧ್ಯ, ಅನನ್ಯ, ಭೀಮಾಶಂಕರ, ನಾಗರತ್ನ, ಎಲ್. ಗಾಯತ್ರಮ್ಮ, ಕೆ.ಎಲ್.ಗಾಯತ್ರಮ್ಮ, ಮಂಜುಳ, ನರಸಿಂಹರಾಜ ಚಾಲಕ), ಜಯರಾಮರೆಡ್ಡಿ, ನಾಗರಾಜ, ಮರಿಯಮ್ಮ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಮಕ್ಕಳಿದ್ದಾರೆ.</p><p> ಟಿ ಟಿ ವಾಹನವು ಕಲಬುರಗಿಯಿಂದ ಆರೋಡಿ ಗ್ರಾಮಕ್ಕೆ ತೆರಳುತ್ತಿತ್ತು. ಕಲಬರುಗಿಯಲ್ಲಿ ನಿಶ್ಚಿತಾರ್ಥ ಮುಗಿಸಿಕೊಂಡು ಸ್ವಗ್ರಾಮ ತೆರಳುವಾಗ ಅಪಘಾತವಾಗಿದೆ.</p>.ದಾವಣಗೆರೆಯಲ್ಲಿ ಭೀಕರ ಅಪಘಾತ: ಶ್ರೀರಾಮ ಸೇನೆ ಮುಖಂಡ ಸೇರಿ ಇಬ್ಬರ ಸ್ಥಿತಿ ಗಂಭೀರ. <p> ಗಂಗಾವತಿಯಿಂದ ಮೈಸೂರಿಗೆ ಹೊರಟಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ಕೆಟ್ಟು ನಿಂತಿತ್ತು. ನಸುಕಿನ 2.40ರ ವೇಳೆ ಲಾರಿಗೆ ಟಿ ಟಿ ಗಾಡಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.</p><p>ಡಿಕ್ಕಿಯ ರಭಸಕ್ಕೆ ಟಿಟಿ ವಾಹನವು ನಜ್ಜುಗುಜ್ಜಾಗಿದ್ದು, ಇಬ್ಬರು ಸಿಲುಕಿಕೊಂಡಿದ್ದರು. ಅವರನ್ನು ಹೊರ ತೆಗೆಯಲು ಪೊಲೀಸರು, ಟೋಲ್ ಸಿಬ್ಬಂದಿ ಹರಸಾಹಸಪಟ್ಟರು. </p><p>ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p> .ಚಿಂತಾಮಣಿ | ಶಾಲಾ ವಾಹನ ಅಪಘಾತ: 7 ವಿದ್ಯಾರ್ಥಿಗಳಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>