<p><strong>ಕಾನಹೊಸಹಳ್ಳಿ (ಕೂಡ್ಲಿಗಿ ತಾಲ್ಲೂಕು/ವಿಜಯನಗರ ಜಿಲ್ಲೆ):</strong> ಸಮೀಪದ ಕ್ಯಾಸನಕೆರೆ ಗ್ರಾಮದಲ್ಲಿ ವಾಂತಿ, ಭೇದಿಗೆ ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಗ್ರಾಮದಲ್ಲಿ ಸಂಚರಿಸಿ ಕುಡಿಯುವ ನೀರು ಸರಬರಾಜು ಆಗುವ ಪೈಪ್ ಲೈನ್, ಓವರ್ ಹೆಡ್ ಟ್ಯಾಂಕ್ ಹಾಗೂ ಮಿನಿ ಟ್ಯಾಂಕ್ ಗಳನ್ನು ವೀಕ್ಷಿಸಿದ ಅವರು, ಗ್ರಾಮದಲ್ಲಿ ಮತ್ತೊಮ್ಮೆ ಸ್ವಚ್ಛತೆ ಕೈಗೊಳ್ಳುವಂತೆ ಚೌಡಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕ್ಯಾಸನಕೆರೆ ಗ್ರಾಮದಿಂದ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಾಂತಿ, ಭೇದಿಯಿಂದ ದಾಖಲಾಗಿದ್ದ ರೋಗಿಗಳ ಆರೋಗ್ಯವನ್ನು ಅವರು ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.</p>.<p>ತಹಶೀಲ್ದಾರ್ ಟಿ.ಜಗದೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್, ಸಿ.ಡಿ.ಪಿ.ಒ ನಾಗನಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಇದ್ದರು.</p>.<p><strong>ಘಟನೆ ವಿವರ:</strong> ಕ್ಯಾಸನಕೆರೆ ಗ್ರಾಮದಲ್ಲಿ ವಾಂತಿ, ಭೇದಿಯಿಂದ ಆ.12 ರಂದು ಬಿಂದು ಎಂಬ ಬಾಲಕಿ ಮೃತಪಟ್ಟಿದ್ದಳು. ಹತ್ತು ಜನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಕಲುಷಿತ ನೀರು ಸೇವನೆಯೇ ಘಟನೆಗೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಇದುವರೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆ ನಂತರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಲೀಂ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದಲ್ಲಿ ತಾತ್ಕಾಲಿಕ ತಪಾಸಣಾ ಕೇಂದ್ರವೂ ತೆರಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನಹೊಸಹಳ್ಳಿ (ಕೂಡ್ಲಿಗಿ ತಾಲ್ಲೂಕು/ವಿಜಯನಗರ ಜಿಲ್ಲೆ):</strong> ಸಮೀಪದ ಕ್ಯಾಸನಕೆರೆ ಗ್ರಾಮದಲ್ಲಿ ವಾಂತಿ, ಭೇದಿಗೆ ಬಾಲಕಿ ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಗ್ರಾಮದಲ್ಲಿ ಸಂಚರಿಸಿ ಕುಡಿಯುವ ನೀರು ಸರಬರಾಜು ಆಗುವ ಪೈಪ್ ಲೈನ್, ಓವರ್ ಹೆಡ್ ಟ್ಯಾಂಕ್ ಹಾಗೂ ಮಿನಿ ಟ್ಯಾಂಕ್ ಗಳನ್ನು ವೀಕ್ಷಿಸಿದ ಅವರು, ಗ್ರಾಮದಲ್ಲಿ ಮತ್ತೊಮ್ಮೆ ಸ್ವಚ್ಛತೆ ಕೈಗೊಳ್ಳುವಂತೆ ಚೌಡಾಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕ್ಯಾಸನಕೆರೆ ಗ್ರಾಮದಿಂದ ಕೂಡ್ಲಿಗಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಾಂತಿ, ಭೇದಿಯಿಂದ ದಾಖಲಾಗಿದ್ದ ರೋಗಿಗಳ ಆರೋಗ್ಯವನ್ನು ಅವರು ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.</p>.<p>ತಹಶೀಲ್ದಾರ್ ಟಿ.ಜಗದೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್, ಸಿ.ಡಿ.ಪಿ.ಒ ನಾಗನಗೌಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಶಾಂತ್ ಇದ್ದರು.</p>.<p><strong>ಘಟನೆ ವಿವರ:</strong> ಕ್ಯಾಸನಕೆರೆ ಗ್ರಾಮದಲ್ಲಿ ವಾಂತಿ, ಭೇದಿಯಿಂದ ಆ.12 ರಂದು ಬಿಂದು ಎಂಬ ಬಾಲಕಿ ಮೃತಪಟ್ಟಿದ್ದಳು. ಹತ್ತು ಜನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.</p>.<p>ಕಲುಷಿತ ನೀರು ಸೇವನೆಯೇ ಘಟನೆಗೆ ಕಾರಣವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಇದುವರೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆ ನಂತರ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್ ನಾರಾಯಣರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಲೀಂ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರದೀಪ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದಲ್ಲಿ ತಾತ್ಕಾಲಿಕ ತಪಾಸಣಾ ಕೇಂದ್ರವೂ ತೆರಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>