<p><strong>ಹಗರಿಬೊಮ್ಮನಹಳ್ಳಿ</strong>: ತಾಲ್ಲೂಕಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ, ಜೆಡಿಎಸ್ ಮುಖಂಡರಿಂದ ಲೋಕಸಭಾ ಚುನಾವಣೆಯ ಪ್ರಚಾರ ಕಾವೇರಿದ್ದರೆ ಅದಕ್ಕೆ ತಕ್ಕಂತೆ ಬಿಸಿಲಿನ ತಾಪವೂ ಹೆಚ್ಚತೊಡಗಿದೆ. ಸೂರ್ಯನ ಶಾಖದಿಂದ ಪಾರಾಗಲು ರಾಜಕೀಯ ಮುಖಂಡರು ಮರಗಳ ಮೊರೆ ಹೋಗುತ್ತಿದ್ದಾರೆ.</p>.<p>ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಮರಗಳನ್ನು ಆಶ್ರಯಿಸುತ್ತಿದ್ದಾರೆ. ಅದರ ನೆರಳಿನಲ್ಲಿಯೇ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಸ್ಥಳೀಯ ಮುಖಂಡರಿಗೆ ಮರಗಳ ಅಡಿಯಲ್ಲಿ ಸಭೆ ಆಯೋಜಿಸುವಂತೆ ಸೂಚಿಸಲಾಗಿದೆ.</p>.<p>ಕೆಎಂಎಫ್ ಅಧ್ಯಕ್ಷ ಎಲ್ಬಿಪಿ ಭೀಮನಾಯ್ಕ ಅವರು ಗುರುವಾರ ತಾಲ್ಲೂಕಿನ ಹರೇಗೊಂಡನಹಳ್ಳಿ, ಮಾಲವಿ, ಮಸಾರಿ ನೆಲ್ಕುದ್ರಿ, ಕೋಗಳಿ ತಾಂಡಾ, ಬೆಣ್ಣೆಕಲ್ಲು, ವರಲಹಳ್ಳಿ, ವಟ್ಟಮ್ಮನಹಳ್ಳಿ, ವಲ್ಲಭಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆ ನಡೆಸಿದ್ದು ಕೂಡ ಮರಗಳ ನೆರಳಿನಲ್ಲಿಯೇ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ತಾಲ್ಲೂಕಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ, ಜೆಡಿಎಸ್ ಮುಖಂಡರಿಂದ ಲೋಕಸಭಾ ಚುನಾವಣೆಯ ಪ್ರಚಾರ ಕಾವೇರಿದ್ದರೆ ಅದಕ್ಕೆ ತಕ್ಕಂತೆ ಬಿಸಿಲಿನ ತಾಪವೂ ಹೆಚ್ಚತೊಡಗಿದೆ. ಸೂರ್ಯನ ಶಾಖದಿಂದ ಪಾರಾಗಲು ರಾಜಕೀಯ ಮುಖಂಡರು ಮರಗಳ ಮೊರೆ ಹೋಗುತ್ತಿದ್ದಾರೆ.</p>.<p>ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಮರಗಳನ್ನು ಆಶ್ರಯಿಸುತ್ತಿದ್ದಾರೆ. ಅದರ ನೆರಳಿನಲ್ಲಿಯೇ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಸ್ಥಳೀಯ ಮುಖಂಡರಿಗೆ ಮರಗಳ ಅಡಿಯಲ್ಲಿ ಸಭೆ ಆಯೋಜಿಸುವಂತೆ ಸೂಚಿಸಲಾಗಿದೆ.</p>.<p>ಕೆಎಂಎಫ್ ಅಧ್ಯಕ್ಷ ಎಲ್ಬಿಪಿ ಭೀಮನಾಯ್ಕ ಅವರು ಗುರುವಾರ ತಾಲ್ಲೂಕಿನ ಹರೇಗೊಂಡನಹಳ್ಳಿ, ಮಾಲವಿ, ಮಸಾರಿ ನೆಲ್ಕುದ್ರಿ, ಕೋಗಳಿ ತಾಂಡಾ, ಬೆಣ್ಣೆಕಲ್ಲು, ವರಲಹಳ್ಳಿ, ವಟ್ಟಮ್ಮನಹಳ್ಳಿ, ವಲ್ಲಭಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆ ನಡೆಸಿದ್ದು ಕೂಡ ಮರಗಳ ನೆರಳಿನಲ್ಲಿಯೇ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>