<p><strong>ಅರಸೀಕೆರೆ</strong>: ಜನಪ್ರತಿನಿಧಿಗಳಿಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಾಗ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.</p>.<p>ಗ್ರಾಮದ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಚುನಾಯಿತ ಪ್ರತಿನಿಧಿ ಹಾಗೂ ಅಧಿಕಾರಗಳಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವ ಇಚ್ಛಾಶಕ್ತಿಯೊಂದಿದ್ದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೊಂದುವುದರಲ್ಲಿ ಅನುಮಾನವೇ ಇಲ್ಲ’ ಎಂದರು.</p>.<p>ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ಅರಸೀಕೆರೆ ಹರಪನಹಳ್ಳಿ ಕ್ಷೇತ್ರದಿಂದ ಬೇರ್ಪಟ್ಟಿದ್ದರೂ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್, ಎಂ.ಪಿ. ರವೀಂದ್ರ ಅವರು ಅಭಿವೃದ್ಧಿಯ ಬೆಳಕು ಚೆಲ್ಲಿದ್ದರು. ಆ ಪ್ರತೀತಿಯನ್ನು ಎಂ.ಪಿ. ಲತಾ ಮುಂದುವರಿಸಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿ ಮಾಡಲಿ’ ಎಂದರು.</p>.<p>ಕೆ.ಎಂ. ಶಿವಕುಮಾರ್ ಸ್ವಾಮಿ, ಪರಶುರಾಮಪ್ಪ, ಅಂಜಿನಪ್ಪ, ವಿಜಯಲಕ್ಷ್ಮೀ, ಭಾಗ್ಯಮ್ಮ, ಚಿಕ್ಕೇರಿ ಬಸಣ್ಣ, ನಾಗರಾಜ್, ಬಿ.ರಾಮಣ್ಣ, ಸಲಾಂ ಸಾಬ್, ಮಹಾಂತೇಶ್, ಚಂದ್ರಪ್ಪ, ಪೂಜಾರ್ ಮರಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ಜನಪ್ರತಿನಿಧಿಗಳಿಗೆ ಸಿಕ್ಕಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಾಗ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.</p>.<p>ಗ್ರಾಮದ ಕೋಲಶಾಂತೇಶ್ವರ ಮಠದ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಚುನಾಯಿತ ಪ್ರತಿನಿಧಿ ಹಾಗೂ ಅಧಿಕಾರಗಳಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆ ತಲುಪಿಸುವ ಇಚ್ಛಾಶಕ್ತಿಯೊಂದಿದ್ದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹೊಂದುವುದರಲ್ಲಿ ಅನುಮಾನವೇ ಇಲ್ಲ’ ಎಂದರು.</p>.<p>ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ಅರಸೀಕೆರೆ ಹರಪನಹಳ್ಳಿ ಕ್ಷೇತ್ರದಿಂದ ಬೇರ್ಪಟ್ಟಿದ್ದರೂ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್, ಎಂ.ಪಿ. ರವೀಂದ್ರ ಅವರು ಅಭಿವೃದ್ಧಿಯ ಬೆಳಕು ಚೆಲ್ಲಿದ್ದರು. ಆ ಪ್ರತೀತಿಯನ್ನು ಎಂ.ಪಿ. ಲತಾ ಮುಂದುವರಿಸಿಕೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿ ಮಾಡಲಿ’ ಎಂದರು.</p>.<p>ಕೆ.ಎಂ. ಶಿವಕುಮಾರ್ ಸ್ವಾಮಿ, ಪರಶುರಾಮಪ್ಪ, ಅಂಜಿನಪ್ಪ, ವಿಜಯಲಕ್ಷ್ಮೀ, ಭಾಗ್ಯಮ್ಮ, ಚಿಕ್ಕೇರಿ ಬಸಣ್ಣ, ನಾಗರಾಜ್, ಬಿ.ರಾಮಣ್ಣ, ಸಲಾಂ ಸಾಬ್, ಮಹಾಂತೇಶ್, ಚಂದ್ರಪ್ಪ, ಪೂಜಾರ್ ಮರಿಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>