‘ನಟ, ನಿರ್ದೇಶಕ, ನಾಟಕಕಾರ, ಬೆಳಕು ವಿನ್ಯಾಸಕಾರ, ಸಂಘಟಕರಾಗಿ ಹಲವು ವರ್ಷಗಳಿಂದ ರವಿ ಕುಲಕರ್ಣಿ ಅವರು ರಂಗಭೂಮಿಯಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶನಿವಾರ (ಜು.30) ಸಂಜೆ 6.30ಕ್ಕೆ ನಗರದ ಪಂಪಾ ಕಲಾ ಮಂದಿರದಲ್ಲಿ ಹಮ್ಮಿಕೊಂಡಿರುವ ಟಿ.ಪಿ. ಕೈಲಾಸಂ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ, ₹5 ಸಾವಿರ ನಗದು, ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ’ ಎಂದು ಸಂಘದ ಕಾರ್ಯದರ್ಶಿ ಎಸ್.ಎಸ್. ಚಂದ್ರಶೇಖರ್ ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.