<p><strong>ಹೊಸಪೇಟೆ (ವಿಜಯನಗರ): </strong>ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶೆ ತೃಪ್ತಿ ಧರಣಿ ಅವರು ಮೂರು ವರ್ಷ ಸಾದಾ ಜೈಲು ಶಿಕ್ಷೆ, ₹3,000 ದಂಡ ವಿಧಿಸಿ ಮಂಗಳವಾರ ಆದೇಶ ನೀಡಿದ್ದಾರೆ. ದಂಡ ಕಟ್ಟದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಸಾದಾ ಶಿಕ್ಷೆ ವಿಧಿಸಬೇಕು ಎಂದು ತಿಳಿಸಿದ್ದಾರೆ.</p>.<p>ಚಿತ್ರಕೇರಿ ನಿವಾಸಿ ಪೆನ್ನಪ್ಪ ಅಲಿಯಾಸ್ ಮೊಟ್ಟೆ ಪೆನ್ನಪ್ಪ ಅಲಿಯಾಸ್ ದೊಡ್ಡ ಪೆನ್ನ ಶಿಕ್ಷೆಗೆ ಒಳಗಾದ ವ್ಯಕ್ತಿ. ಪೆನ್ನಪ್ಪ, 2020, ಜನವರಿ 27ರ ಬೆಳಗಿನ ಜಾವ ಗಾಂಧಿ ಕಾಲೊನಿಯ ಪಾರ್ವತಿ ಜಿ. ಚೌಡಪ್ಪ ಅವರ ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದರು. ಗಾದ್ರೇಜ್ನಿಂದ ₹70,000 ನಗದು, ₹24,000 ಮೌಲ್ಯದ ಆರು ಗ್ರಾಂ ಚಿನ್ನದ ಉಂಗುರ, ₹50,000 ಮೌಲ್ಯದ ಬೆಳ್ಳಿಯ ತಲಾ ಒಂದು ಗಣೇಶ, ಸರಸ್ವತಿ ಹಾಗೂ ಲಕ್ಷ್ಮಿ ಮೂರ್ತಿ, 4 ಬೆಳ್ಳಿ ಗ್ಲಾಸ್, 8 ಬೆಳ್ಳಿ ದೀಪ, 2 ಕುಂಕುಮ ಭರಣಿ ಕದ್ದೊಯ್ದಿದ್ದರು.</p>.<p>ಮನೆಯವರು ನೀಡಿದ ದೂರಿನ ಮೇರೆಗೆ ಸಿಪಿಐಗಳಾದ ವಿ. ನಾರಾಯಣ ಹಾಗೂ ಪ್ರಸಾದ್ ಕೆ. ಗೋಖಲೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.<br />ವಾದ, ಪ್ರತಿವಾದ ಆಲಿಸಿ, ಕಳ್ಳತನ ಮಾಡಿರುವುದು ರುಜುವಾತು ಆಗಿರುವುದರಿಂದ ಮೇಲಿನಂತೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಗೀತಾ ಎಸ್. ಮಿರಜಕರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ): </strong>ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶೆ ತೃಪ್ತಿ ಧರಣಿ ಅವರು ಮೂರು ವರ್ಷ ಸಾದಾ ಜೈಲು ಶಿಕ್ಷೆ, ₹3,000 ದಂಡ ವಿಧಿಸಿ ಮಂಗಳವಾರ ಆದೇಶ ನೀಡಿದ್ದಾರೆ. ದಂಡ ಕಟ್ಟದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಸಾದಾ ಶಿಕ್ಷೆ ವಿಧಿಸಬೇಕು ಎಂದು ತಿಳಿಸಿದ್ದಾರೆ.</p>.<p>ಚಿತ್ರಕೇರಿ ನಿವಾಸಿ ಪೆನ್ನಪ್ಪ ಅಲಿಯಾಸ್ ಮೊಟ್ಟೆ ಪೆನ್ನಪ್ಪ ಅಲಿಯಾಸ್ ದೊಡ್ಡ ಪೆನ್ನ ಶಿಕ್ಷೆಗೆ ಒಳಗಾದ ವ್ಯಕ್ತಿ. ಪೆನ್ನಪ್ಪ, 2020, ಜನವರಿ 27ರ ಬೆಳಗಿನ ಜಾವ ಗಾಂಧಿ ಕಾಲೊನಿಯ ಪಾರ್ವತಿ ಜಿ. ಚೌಡಪ್ಪ ಅವರ ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದರು. ಗಾದ್ರೇಜ್ನಿಂದ ₹70,000 ನಗದು, ₹24,000 ಮೌಲ್ಯದ ಆರು ಗ್ರಾಂ ಚಿನ್ನದ ಉಂಗುರ, ₹50,000 ಮೌಲ್ಯದ ಬೆಳ್ಳಿಯ ತಲಾ ಒಂದು ಗಣೇಶ, ಸರಸ್ವತಿ ಹಾಗೂ ಲಕ್ಷ್ಮಿ ಮೂರ್ತಿ, 4 ಬೆಳ್ಳಿ ಗ್ಲಾಸ್, 8 ಬೆಳ್ಳಿ ದೀಪ, 2 ಕುಂಕುಮ ಭರಣಿ ಕದ್ದೊಯ್ದಿದ್ದರು.</p>.<p>ಮನೆಯವರು ನೀಡಿದ ದೂರಿನ ಮೇರೆಗೆ ಸಿಪಿಐಗಳಾದ ವಿ. ನಾರಾಯಣ ಹಾಗೂ ಪ್ರಸಾದ್ ಕೆ. ಗೋಖಲೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.<br />ವಾದ, ಪ್ರತಿವಾದ ಆಲಿಸಿ, ಕಳ್ಳತನ ಮಾಡಿರುವುದು ರುಜುವಾತು ಆಗಿರುವುದರಿಂದ ಮೇಲಿನಂತೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಗೀತಾ ಎಸ್. ಮಿರಜಕರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>