ನಡೆದದ್ದೇನು?
2021ರ ಜುಲೈ 15ರಿಂದ 16ರ ನಡುವೆ ಕೌಲ್ಪೇಟೆಯ ಮಟನ್ ಮಾರುಕಟ್ಟೆ ಬಳಿಯ ಮನೆಯ ಬೀಗ ಮುರಿದು ₹20,000 ಮೌಲ್ಯದ ವಸ್ತುಗಳನ್ನು ಕದ್ದೊಯ್ದಿದ್ದರು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಬಿ. ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕಿ ಗೀತಾ ಎಸ್. ಮಿರಜಕರ್ ಸರ್ಕಾರದ ಪರ ವಾದ ಮಂಡಿಸಿದ್ದರು.