<p><strong>ಹರಪನಹಳ್ಳಿ:</strong> ಇಬ್ಬರು ಶಿಕ್ಷಕಿಯರ ಮನೆಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳು ನಗರದಲ್ಲಿ ದಾಖಲಾಗಿದೆ.</p>.<p>ಬಾಣಗೇರಿ ನಿವಾಸಿ, ಶಿಕ್ಷಕಿ ಬಿ.ಶಹಾನಾಜ್ ಅವರು ಡಿ.30ರಂದು ಬೆಳಿಗ್ಗೆ ಶಾಲೆಗೆ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಅವರ ವೃದ್ಧ ತಾಯಿ ಮಲಗಿರುವ ವೇಳೆ ಕಳ್ಳರು ಪ್ರವೇಶಿಸಿ, ಬೆಡ್ ರೂಂ ಬಾಗಿಲ ಚಿಲಕ ಮುರಿದಿದ್ದಾರೆ. ಅಂದಾಜು ₹18.60 ಲಕ್ಷ ಮೌಲ್ಯದ 15 ತೊಲ ಬಂಗಾರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಶಹಾನಾಜ್ ಸಂಜೆ ಮನೆ ತಲುಪಿದಾಗ ಘಟನೆ ಅರಿವಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಪ್ರೌಢಶಾಲೆ ಶಿಕ್ಷಕಿ ಎಚ್.ವೀರಮ್ಮ ಅವರ ಮನೆಯಲ್ಲಿ ಅ.21ರಂದು ₹2.20 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದ್ದು, ಡಿ.31ರಂದು ದೂರು ದಾಖಲಿಸಲಾಗಿದೆ. ವೀರಮ್ಮ ಅವರ ಮನೆಯಲ್ಲಿ 20 ಗ್ರಾಂ ಬಂಗಾರದ ಬಳೆ, 500 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಇಬ್ಬರು ಶಿಕ್ಷಕಿಯರ ಮನೆಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳು ನಗರದಲ್ಲಿ ದಾಖಲಾಗಿದೆ.</p>.<p>ಬಾಣಗೇರಿ ನಿವಾಸಿ, ಶಿಕ್ಷಕಿ ಬಿ.ಶಹಾನಾಜ್ ಅವರು ಡಿ.30ರಂದು ಬೆಳಿಗ್ಗೆ ಶಾಲೆಗೆ ತೆರಳಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಅವರ ವೃದ್ಧ ತಾಯಿ ಮಲಗಿರುವ ವೇಳೆ ಕಳ್ಳರು ಪ್ರವೇಶಿಸಿ, ಬೆಡ್ ರೂಂ ಬಾಗಿಲ ಚಿಲಕ ಮುರಿದಿದ್ದಾರೆ. ಅಂದಾಜು ₹18.60 ಲಕ್ಷ ಮೌಲ್ಯದ 15 ತೊಲ ಬಂಗಾರದ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಶಹಾನಾಜ್ ಸಂಜೆ ಮನೆ ತಲುಪಿದಾಗ ಘಟನೆ ಅರಿವಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಮತ್ತೊಂದು ಪ್ರಕರಣದಲ್ಲಿ ಪ್ರೌಢಶಾಲೆ ಶಿಕ್ಷಕಿ ಎಚ್.ವೀರಮ್ಮ ಅವರ ಮನೆಯಲ್ಲಿ ಅ.21ರಂದು ₹2.20 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿದ್ದು, ಡಿ.31ರಂದು ದೂರು ದಾಖಲಿಸಲಾಗಿದೆ. ವೀರಮ್ಮ ಅವರ ಮನೆಯಲ್ಲಿ 20 ಗ್ರಾಂ ಬಂಗಾರದ ಬಳೆ, 500 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>