ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳನ ಬಂಧನ: ಬೆಳ್ಳಿ, ಬಂಗಾರದ ಆಭರಣ ವಶ

Published 30 ಮೇ 2023, 6:11 IST
Last Updated 30 ಮೇ 2023, 6:11 IST
ಅಕ್ಷರ ಗಾತ್ರ

ಕೊಟ್ಟೂರು: ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಸೋಮವಾರ ಕಳ್ಳನೊಬ್ಬನನ್ನು ಬಂಧಿಸಿ ಆತನಿಂದ ಬೆಳ್ಳಿ, ಬಂಗಾರದ ಆಭರಣ ಸೇರಿದಂತೆ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಮಾರ್ಚ್ ತಿಂಗಳಲ್ಲಿ ಪಟ್ಟಣದ ಎರಡು ಮನೆಗಳಲ್ಲಿ ಕಳ್ಳತನವಾದ ಬಗ್ಗೆ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿತರ ಪತ್ತೆಗೆ ಎಸ್.ಪಿ.ಯವರ ಮಾರ್ಗದರ್ಶನದಲ್ಲಿ ಕೂಡ್ಲಿಗಿ ಡಿವೈಎಸ್ಪಿ ಇವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು.

ತಂಡ ಸೋಮವಾರ ಆರೋಪಿಯನ್ನು ಪತ್ತೆಮಾಡಿ ಒಟ್ಟು ಎರಡು ಪ್ರಕರಣಗಳಿಂದ 31.4 ಗ್ರಾಂ ಬಂಗಾರದ ಆಭರಣಗಳು, 232 ಗ್ರಾಂ ಬೆಳ್ಳಿ ಕಾಲು ಚೈನುಗಳು ಮತ್ತು ರೂ.1,71,000 ನಗದು ಹಣವನ್ನು ಹಾಗೂ ಕಳವು ಮಾಡಿದ ಹಣದಲ್ಲಿ ಖರೀದಿಸಿದ ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT