ಗ್ರಾಮದಲ್ಲಿ ಎರಡನೇ ಹಂತದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಇದರಿಂದ ಶೇ 70ರಷ್ಟು ರೈತರಿಗೆ ಪ್ರಯೋಜನವಾಗುತ್ತದೆ. ಈ ಸಂಬಂಧ ಏಳು ಸಾವಿರಕ್ಕೂ ಹೆಚ್ಚು ಪತ್ರ ಬರೆದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.
ಪಾದಯಾತ್ರೆಯ ಸಂಚಾಲಕ ಅಕ್ಕಿ ತೋಟೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮೈಲಾರ ಶಿವಕುಮಾರ, ಹರಿಜನ ದೊಡ್ಡಬಸಪ್ಪ, ಮುಖಂಡರಾದ ಟಿ. ವೆಂಕೋಬಪ್ಪ, ಹೆಗ್ಡಾಳ್ ರಾಮಣ್ಣ, ದೊಡ್ಡಬಸಪ್ಪ, ಸುರೇಶ್, ದೇವಿಪ್ರಸಾದ್, 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.