ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂ.ವೀರಭದ್ರಪ್ಪಗೆ ಬೆದರಿಕೆ ಯುವಕ ವಶಕ್ಕೆ

Published 9 ಜೂನ್ 2023, 19:46 IST
Last Updated 9 ಜೂನ್ 2023, 19:46 IST
ಅಕ್ಷರ ಗಾತ್ರ

ಕೊಟ್ಟೂರು: ಸಾಹಿತಿ ಕುಂ.ವೀರಭದ್ರಪ್ಪನವರಿಗೆ ಕೆಲ ತಿಂಗಳಿನಿಂದ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರದೀಪ್ (36) ಎಂಬ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

‘ಹರಿಹರ ಸಮೀಪದ ಕಮಲಾಪುರದ ನಿವಾಸಿ ಪ್ರದೀಪ್ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಸಿಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ನನಗೆ ಬಂದ ಬೆದರಿಕೆ ಪತ್ರದ ಹಿನ್ನಲೆಯಲ್ಲಿ ಯುವಕನನ್ನು ವಿಚಾರಣೆ ನಡೆಸುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾನೀಗ ಚಾಮರಾಜನಗರದಲ್ಲಿ ಇದ್ದೇನೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ’ ಎಂದು ಸಾಹಿತಿ ಕುಂ.ವೀರಭದ್ರಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT