ಕೊಟ್ಟೂರು (ವಿಜಯನಗರ ಜಿಲ್ಲೆ): ಸಾಹಿತಿ ಕುಂ.ವೀರಭದ್ರಪ್ಪ ಅವರಿಗೆ ಕೆಲ ತಿಂಗಳಿನಿಂದ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪ್ರದೀಪ್ (36) ಎಂಬ ಯುವಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
‘ಹರಿಹರ ಸಮೀಪದ ಕಮಲಾಪುರದ ನಿವಾಸಿ ಪ್ರದೀಪ್ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ನಿಖರ ಮಾಹಿತಿ ಸಿಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ನನಗೆ ಬಂದ ಬೆದರಿಕೆ ಪತ್ರದ ಹಿನ್ನಲೆಯಲ್ಲಿ ಯುವಕನನ್ನು ವಿಚಾರಣೆ ನಡೆಸುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಾನೀಗ ಚಾಮರಾಜನಗರದಲ್ಲಿ ಇದ್ದೇನೆ. ಹೆಚ್ಚಿನ ಮಾಹಿತಿ ಗೊತ್ತಿಲ್ಲ’ ಎಂದು ಕುಂ.ವೀರಭದ್ರಪ್ಪ ತಿಳಿಸಿದರು.