ಹೊಸಪೇಟೆ (ವಿಜಯನಗರ): ಜಿಲ್ಲೆಯ ಹೊಸಪೇಟೆ, ಹರಪನಹಳ್ಳಿ, ಕೊಟ್ಟೂರು ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದೆ.
ಮಳೆಗೆ ಹರಪನಹಳ್ಳಿ ಪಟ್ಟಣದ ಎಚ್ಪಿಎಸ್ ಕಾಲೇಜಿನ ಮಸ್ಟರಿಂಗ್ ಕೇಂದ್ರದಲ್ಲಿ ಹಾಕಿದ್ದ ಶಾಮಿಯಾನ ತೋಯ್ದು ನೀರು ಜಿನುಗುತ್ತಿತ್ತು. ಆದರೆ, ಅಷ್ಟರಲ್ಲಾಗಲೇ ಮತಗಟ್ಟೆ ಸಿಬ್ಬಂದಿ ಅಲ್ಲಿಂದ ನಿರ್ಗಮಿಸಿದ್ದರು. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ, ಕುರುಗೋಡಿನ ಕೆಲವು ಭಾಗಗಳಲ್ಲಿ ಮಳೆಯಾಗಿರುವುದು ವರದಿಯಾಗಿದೆ. ಮಂಗಳವಾರ ದಿನವಿಡೀ ಕೆಂಡದಂತಹ ಬಿಸಿಲು, ಸೆಕೆ ಇತ್ತು. ಮಳೆಯಾಗಿದ್ದರಿಂದ ವಾತಾವರಣ ತಂಪಾಗಿತ್ತು.