<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ‘ಫೆಬ್ರುವರಿ 5ರ ಬಳಿಕ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿಯಾಗುವೆ. ಸಂವಹನ ಕೊರತೆ ಮತ್ತು ಇನ್ನಿತರ ಸಮಸ್ಯೆಗಳಿಂದ ಆಗಿರುವ ಗೊಂದಲವನ್ನು ಪಕ್ಷದ ನಾಯಕರು ಸರಿಪಡಿಸುವ ವಿಶ್ವಾಸವಿದೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.</p>.<p>‘ಜನಾರ್ದನ ರೆಡ್ಡಿ ಪಕ್ಷದ ಕಾರ್ಯಕರ್ತರೇ ಹೊರತು ವರಿಷ್ಠರಲ್ಲ. ಪಕ್ಷ ತೊರೆಯುವಂತೆ ಅವರು ಹೇಳಿದ್ದಕ್ಕೆ ಮಹತ್ವ ಕೊಡಬೇಕಿಲ್ಲ. ವರಿಷ್ಠರ ಇಚ್ಛೆಯಂತೆ ನಾನು ಪಕ್ಷದಲ್ಲೇ ಇರುತ್ತೇನೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಯತ್ನಾಳ, ರಮೇಶ್ ಜಾರಕಿಹೊಳಿ, ಸುಧಾಕರ್ ಅವರೆಲ್ಲ ಕೆಲ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು ಪಕ್ಷದ ವಿರುದ್ಧ ಮಾತನಾಡಿಲ್ಲ. ಅವರೆಲ್ಲ ಇದ್ದರಷ್ಟೇ ಪಕ್ಷ ಸಂಘಟನೆ ಸಾಧ್ಯ. ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರಂತೆಯೇ ವಿಜಯೇಂದ್ರ ಕೂಡ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು’ ಎಂದರು.</p>.<p>‘2028ರಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸುತ್ತೇವೆ. ಪಕ್ಷ ಬಯಸಿದರೆ ಮುಖ್ಯಮಂತ್ರಿ ಆಗಲು ನಾನು ಸಿದ್ಧ’ ಎಂದರು.</p>.<p>Quote - ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಐದು ಕಡೆ ಮೀಸಲು ಕ್ಷೇತ್ರಗಳಿದ್ದು ಎಲ್ಲಾ ಕಡೆಯಿಂದ ಸ್ಪರ್ಧಿಸಲು ನನಗೆ ಆಹ್ವಾನವಿದೆ. ಯಾವ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುವರು.. ಶ್ರೀರಾಮುಲು ಮಾಜಿ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ‘ಫೆಬ್ರುವರಿ 5ರ ಬಳಿಕ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿಯಾಗುವೆ. ಸಂವಹನ ಕೊರತೆ ಮತ್ತು ಇನ್ನಿತರ ಸಮಸ್ಯೆಗಳಿಂದ ಆಗಿರುವ ಗೊಂದಲವನ್ನು ಪಕ್ಷದ ನಾಯಕರು ಸರಿಪಡಿಸುವ ವಿಶ್ವಾಸವಿದೆ’ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.</p>.<p>‘ಜನಾರ್ದನ ರೆಡ್ಡಿ ಪಕ್ಷದ ಕಾರ್ಯಕರ್ತರೇ ಹೊರತು ವರಿಷ್ಠರಲ್ಲ. ಪಕ್ಷ ತೊರೆಯುವಂತೆ ಅವರು ಹೇಳಿದ್ದಕ್ಕೆ ಮಹತ್ವ ಕೊಡಬೇಕಿಲ್ಲ. ವರಿಷ್ಠರ ಇಚ್ಛೆಯಂತೆ ನಾನು ಪಕ್ಷದಲ್ಲೇ ಇರುತ್ತೇನೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಯತ್ನಾಳ, ರಮೇಶ್ ಜಾರಕಿಹೊಳಿ, ಸುಧಾಕರ್ ಅವರೆಲ್ಲ ಕೆಲ ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು ಪಕ್ಷದ ವಿರುದ್ಧ ಮಾತನಾಡಿಲ್ಲ. ಅವರೆಲ್ಲ ಇದ್ದರಷ್ಟೇ ಪಕ್ಷ ಸಂಘಟನೆ ಸಾಧ್ಯ. ಪ್ರಶ್ನಾತೀತ ನಾಯಕ ಯಡಿಯೂರಪ್ಪ ಅವರಂತೆಯೇ ವಿಜಯೇಂದ್ರ ಕೂಡ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು’ ಎಂದರು.</p>.<p>‘2028ರಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸುತ್ತೇವೆ. ಪಕ್ಷ ಬಯಸಿದರೆ ಮುಖ್ಯಮಂತ್ರಿ ಆಗಲು ನಾನು ಸಿದ್ಧ’ ಎಂದರು.</p>.<p>Quote - ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಐದು ಕಡೆ ಮೀಸಲು ಕ್ಷೇತ್ರಗಳಿದ್ದು ಎಲ್ಲಾ ಕಡೆಯಿಂದ ಸ್ಪರ್ಧಿಸಲು ನನಗೆ ಆಹ್ವಾನವಿದೆ. ಯಾವ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುವರು.. ಶ್ರೀರಾಮುಲು ಮಾಜಿ ಸಚಿವ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>