<p>ಹೊಸಪೇಟೆ (ವಿಜಯನಗರ): ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.</p>.<p>ಬಿಜೆಪಿಯಿಂದ ಇಲ್ಲಿನ ಆಜಾದ್ ನಗರದ ಉಮರ್ ಫಂಕ್ಷನ್ ಹಾಲ್ನಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಬಿಜೆಪಿ ಪಕ್ಷ ಎಲ್ಲ ಜಾತಿ, ಜನಾಂಗದವರ ಕಲ್ಯಾಣಕ್ಕೆ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೂ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರ ಬಗ್ಗೆ ಸೂಕ್ತ ಮಾಹಿತಿ ಪಡೆದು ಲಾಭ ಪಡೆಯಬೇಕೆಂದು ತಿಳಿಸಿದರು.<br />ಇದೇ ವೇಳೆ ಅಂಗವಿಕಲರಿಗೆ ಮೂರು ಚಕ್ರದ ವಾಹನಗಳನ್ನು ವಿತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷ ಟಿಂಕರ್ ರಫೀಕ್, ಹಮೀದ್, ಸಮಿವುಲ್ಲಾ, ಸಿದ್ದಾರ್ಥ ಸಿಂಗ್, ಶಂಕರ್ ಮೇಟಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ (ವಿಜಯನಗರ): ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.</p>.<p>ಬಿಜೆಪಿಯಿಂದ ಇಲ್ಲಿನ ಆಜಾದ್ ನಗರದ ಉಮರ್ ಫಂಕ್ಷನ್ ಹಾಲ್ನಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಬಿಜೆಪಿ ಪಕ್ಷ ಎಲ್ಲ ಜಾತಿ, ಜನಾಂಗದವರ ಕಲ್ಯಾಣಕ್ಕೆ ಕೆಲಸ ಮಾಡುತ್ತಿದೆ. ಅಲ್ಪಸಂಖ್ಯಾತರ ಕಲ್ಯಾಣಕ್ಕೂ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರ ಬಗ್ಗೆ ಸೂಕ್ತ ಮಾಹಿತಿ ಪಡೆದು ಲಾಭ ಪಡೆಯಬೇಕೆಂದು ತಿಳಿಸಿದರು.<br />ಇದೇ ವೇಳೆ ಅಂಗವಿಕಲರಿಗೆ ಮೂರು ಚಕ್ರದ ವಾಹನಗಳನ್ನು ವಿತರಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ವಕ್ಫ್ ಮಂಡಳಿ ಜಿಲ್ಲಾಧ್ಯಕ್ಷ ಟಿಂಕರ್ ರಫೀಕ್, ಹಮೀದ್, ಸಮಿವುಲ್ಲಾ, ಸಿದ್ದಾರ್ಥ ಸಿಂಗ್, ಶಂಕರ್ ಮೇಟಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>