<p><strong>ಹೂವಿನಹಡಗಲಿ:</strong> ರಾಜ್ಯ ಸಾರಿಗೆ ನಿಗಮಗಳ ನೌಕರರ ಸಂಘಟನೆ ಮಂಗಳವಾರ ಕರೆ ನೀಡಿದ್ದ ಮುಷ್ಕರಕ್ಕೆ ಇಲ್ಲಿನ ಸಾರಿಗೆ ಘಟಕದ ಸಿಬ್ಬಂದಿ ಬೆಂಬಲಿದೇ ಎಲ್ಲರೂ ಕರ್ತ್ಯಕ್ಕೆ ಹಾಜರಾದರು.</p><p>ಘಟಕದ ಅಧಿಕಾರಿಗಳು ಬೆಳಿಗ್ಗೆಯೇ ಕಾರ್ಯಪ್ರವೃತ್ತರಾಗಿ ಚಾಲಕ, ನಿರ್ವಾಹಕ ಮತ್ತು ಸಿಬ್ಬಂದಿಗಳ ಮನೆಗೆ ತೆರಳಿದರು. ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು. ಸಾರಿಗೆ ಘಟಕದ 53 ಮಾರ್ಗಗಳ ಪೈಕಿ ತಾಂತ್ರಿಕ ಕಾರಣದಿಂದ ಒಂದು ಮಾರ್ಗ ಹೊರತುಪಡಿಸಿ ಉಳಿದೆಲ್ಲ ಮಾರ್ಗಗಳು ಕಾರ್ಯಾಚರಣೆಗೊಂಡವು.</p><p>ಎರಡು ದಿನದ ಹಿಂದೆ ಘಟಕಕ್ಕೆ ಭೇಟಿ ನೀಡಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ, ವಿಭಾಗ ತಾಂತ್ರಿಕ ಅಧಿಕಾರಿ ಸಿಬ್ಬಂದಿಯ ಮನವೊಲಿಸಿದ್ದರು. ಮುಷ್ಕರ ನಡೆಸುವುದರಿಂದ ಸಾರ್ವಜನಿಕರು, ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತದೆ. ಸರ್ಕಾರ ಎಸ್ಮಾ ಜಾರಿ ಮಾಡಿದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಸಿಬ್ಬಂದಿಗೆ ಎಚ್ಚರಿಸಿದ್ದರು.</p><p>‘ಆ ಹಿನ್ನೆಲೆಯಲ್ಲಿ ಸಿಬ್ಬಂದಿ ಮುಷ್ಕರ ಬೆಂಬಲಿಸದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ’ ಎಂದು ಚಾಲಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ರಾಜ್ಯ ಸಾರಿಗೆ ನಿಗಮಗಳ ನೌಕರರ ಸಂಘಟನೆ ಮಂಗಳವಾರ ಕರೆ ನೀಡಿದ್ದ ಮುಷ್ಕರಕ್ಕೆ ಇಲ್ಲಿನ ಸಾರಿಗೆ ಘಟಕದ ಸಿಬ್ಬಂದಿ ಬೆಂಬಲಿದೇ ಎಲ್ಲರೂ ಕರ್ತ್ಯಕ್ಕೆ ಹಾಜರಾದರು.</p><p>ಘಟಕದ ಅಧಿಕಾರಿಗಳು ಬೆಳಿಗ್ಗೆಯೇ ಕಾರ್ಯಪ್ರವೃತ್ತರಾಗಿ ಚಾಲಕ, ನಿರ್ವಾಹಕ ಮತ್ತು ಸಿಬ್ಬಂದಿಗಳ ಮನೆಗೆ ತೆರಳಿದರು. ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು. ಸಾರಿಗೆ ಘಟಕದ 53 ಮಾರ್ಗಗಳ ಪೈಕಿ ತಾಂತ್ರಿಕ ಕಾರಣದಿಂದ ಒಂದು ಮಾರ್ಗ ಹೊರತುಪಡಿಸಿ ಉಳಿದೆಲ್ಲ ಮಾರ್ಗಗಳು ಕಾರ್ಯಾಚರಣೆಗೊಂಡವು.</p><p>ಎರಡು ದಿನದ ಹಿಂದೆ ಘಟಕಕ್ಕೆ ಭೇಟಿ ನೀಡಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ, ವಿಭಾಗ ತಾಂತ್ರಿಕ ಅಧಿಕಾರಿ ಸಿಬ್ಬಂದಿಯ ಮನವೊಲಿಸಿದ್ದರು. ಮುಷ್ಕರ ನಡೆಸುವುದರಿಂದ ಸಾರ್ವಜನಿಕರು, ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತದೆ. ಸರ್ಕಾರ ಎಸ್ಮಾ ಜಾರಿ ಮಾಡಿದರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಸಿಬ್ಬಂದಿಗೆ ಎಚ್ಚರಿಸಿದ್ದರು.</p><p>‘ಆ ಹಿನ್ನೆಲೆಯಲ್ಲಿ ಸಿಬ್ಬಂದಿ ಮುಷ್ಕರ ಬೆಂಬಲಿಸದೇ ಕರ್ತವ್ಯಕ್ಕೆ ಹಾಜರಾಗಿದ್ದಾರೆ’ ಎಂದು ಚಾಲಕರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>