ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ಮುಷ್ಕರ ಅಂತ್ಯ ರಸ್ತೆಗಿಳಿದ ಹೆಚ್ಚಿನ ಬಸ್‌

Last Updated 21 ಏಪ್ರಿಲ್ 2021, 16:52 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ತರಬೇಕೆಂದು ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಬುಧವಾರ ಕೊನೆಗೊಂಡಿತು.

ಕಳೆದ ಎರಡ್ಮೂರು ದಿನಗಳಿಂದ ಸಾರಿಗೆ ಸಂಸ್ಥೆಯ ಬಸ್‌ಗಳ ಓಡಾಟ ಹೆಚ್ಚಾಗುತ್ತಲೇ ಇತ್ತು. ಬುಧವಾರ ಮುಷ್ಕರ ಕೊನೆಗೊಂಡಿದ್ದರಿಂದ ಇನ್ನಷ್ಟು ಬಸ್‌ಗಳು ರಸ್ತೆಗಿಳಿದವು. ಬೆರಳೆಣಿಕೆಯಷ್ಟು ಖಾಸಗಿ ವಾಹನಗಳು ಬಸ್‌ ನಿಲ್ದಾಣದಿಂದ ಓಡಾಡಿದವು.

‘ಬುಧವಾರ 258 ಬಸ್‌ಗಳು ಸಂಚಾರ ಬೆಳೆಸಿವೆ. ಹೆಚ್ಚಿನ ಸಿಬ್ಬಂದಿ ಕೆಲಸಕ್ಕೆ ಮರಳಿರುವುದರಿಂದ ಸಂಜೆ, ರಾತ್ರಿ ಕೂಡ ಎಂದಿನಂತೆ ಬಸ್‌ಗಳು ಬೇರೆ ಬೇರೆ ಭಾಗಗಳಿಗೆ ಪಯಣ ಬೆಳೆಸಿವೆ’ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶೀನಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT