<p><strong>ಹೊಸಪೇಟೆ (ವಿಜಯನಗರ):</strong> ಮೂರು ರಾಜ್ಯಗಳ ಲಕ್ಷಾಂತರ ರೈತರು ಕಾತರದಿಂದ ಕಾಯುತ್ತಿದ್ದಂತಹ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್ಗೇಟ್ ಅಳವಡಿಸುವ ಕೆಲಸ ಬುಧವಾರ ಬೆಳಿಗ್ಗೆಯಿಂದ ಆರಂಭವಾಗಿದೆ.</p><p>ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಕೆ.ರೆಡ್ಡಿ, ಅಧೀಕ್ಷಕ ಎಂಜಿನಿಯರ್ಗಳು, ಕಾರ್ಯನಿರ್ವಾಹಕ ಎಂಜಿನಿಯರ್ಗಳ ಉಪಸ್ಥಿತಿಯಲ್ಲಿ ಅಹಮದಾಬಾದ್ನ ಹಾರ್ಡ್ವೇರ್ ಟೂಲ್ಸ್ ಆ್ಯಂಡ್ ಮೆಷಿನರಿ ಪ್ರೊಜೆಕ್ಟ್ ಕಂಪನಿಯ ನುರಿತ ತಜ್ಞರು ಗೇಟ್ ಅಳವಡಿಸುವ ಕೆಲಸ ಆರಂಭಿಸಿದರು.</p><p>ಸಾಂಪ್ರದಾಯಿಕವಾಗಿ ಪೂಜಾ ಕಾರ್ಯವನ್ನು ನಡೆಸಿದ ಬಳಿಕ ಮೊದಲಿಗೆ 18ನೇ ಗೇಟ್ಗೆ ಕ್ರೆಸ್ಟ್ಗೇಟ್ ಅಳವಡಿಸುವ ಕೆಲಸ ಆರಂಭವಾಗಿದ್ದು, ಕ್ರೇನ್ ಮೂಲಕ ಎಂಡ್ ಗೇಟ್ಗಳನ್ನು ತರುವ ಕೆಲಸ ನಡೆಯಿತು.</p><p>ಈ ಮೊದಲೇ ನಿರ್ಧರಿಸಿದಂತೆ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಇದೀಗ 43 ಟಿಎಂಸಿ ಅಡಿಗೆ ಕುಸಿದಿದೆ. ನೀರಿನ ಮಟ್ಟ 1,612.62 ಅಡಿಗೆ (ಗರಿಷ್ಠ 1,633) ಕುಸಿದಿದೆ. ಈ ಮೂಲಕ ಕ್ರೆಸ್ಟ್ಮಟ್ಟದ ಕೆಳಗಡೆಯೇ ಇದೀಗ ನೀರು ಸಂಗ್ರಹವಾಗಿದ್ದು, ಗೇಟ್ ಅಳವಡಿಕೆಗೆ ಇರುವ ಎಲ್ಲಾ ಅಡ್ಡಿಯೂ ನಿವಾರಣೆಯಾಗಿದೆ. </p><p>ನೀರಿನ ಮಟ್ಟ ಕೆಳಗೆ ಇಳಿದಿರುವ ಕಾರಣ ನದಿಗೆ ನೀರು ಹರಿಸುವುದನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಇದೀಗ ಕಾಲುವೆಗಳಿಗೆ ಮಾತ್ರ ನೀರು ಹರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಮೂರು ರಾಜ್ಯಗಳ ಲಕ್ಷಾಂತರ ರೈತರು ಕಾತರದಿಂದ ಕಾಯುತ್ತಿದ್ದಂತಹ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್ಗೇಟ್ ಅಳವಡಿಸುವ ಕೆಲಸ ಬುಧವಾರ ಬೆಳಿಗ್ಗೆಯಿಂದ ಆರಂಭವಾಗಿದೆ.</p><p>ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಒ.ಆರ್.ಕೆ.ರೆಡ್ಡಿ, ಅಧೀಕ್ಷಕ ಎಂಜಿನಿಯರ್ಗಳು, ಕಾರ್ಯನಿರ್ವಾಹಕ ಎಂಜಿನಿಯರ್ಗಳ ಉಪಸ್ಥಿತಿಯಲ್ಲಿ ಅಹಮದಾಬಾದ್ನ ಹಾರ್ಡ್ವೇರ್ ಟೂಲ್ಸ್ ಆ್ಯಂಡ್ ಮೆಷಿನರಿ ಪ್ರೊಜೆಕ್ಟ್ ಕಂಪನಿಯ ನುರಿತ ತಜ್ಞರು ಗೇಟ್ ಅಳವಡಿಸುವ ಕೆಲಸ ಆರಂಭಿಸಿದರು.</p><p>ಸಾಂಪ್ರದಾಯಿಕವಾಗಿ ಪೂಜಾ ಕಾರ್ಯವನ್ನು ನಡೆಸಿದ ಬಳಿಕ ಮೊದಲಿಗೆ 18ನೇ ಗೇಟ್ಗೆ ಕ್ರೆಸ್ಟ್ಗೇಟ್ ಅಳವಡಿಸುವ ಕೆಲಸ ಆರಂಭವಾಗಿದ್ದು, ಕ್ರೇನ್ ಮೂಲಕ ಎಂಡ್ ಗೇಟ್ಗಳನ್ನು ತರುವ ಕೆಲಸ ನಡೆಯಿತು.</p><p>ಈ ಮೊದಲೇ ನಿರ್ಧರಿಸಿದಂತೆ ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಇದೀಗ 43 ಟಿಎಂಸಿ ಅಡಿಗೆ ಕುಸಿದಿದೆ. ನೀರಿನ ಮಟ್ಟ 1,612.62 ಅಡಿಗೆ (ಗರಿಷ್ಠ 1,633) ಕುಸಿದಿದೆ. ಈ ಮೂಲಕ ಕ್ರೆಸ್ಟ್ಮಟ್ಟದ ಕೆಳಗಡೆಯೇ ಇದೀಗ ನೀರು ಸಂಗ್ರಹವಾಗಿದ್ದು, ಗೇಟ್ ಅಳವಡಿಕೆಗೆ ಇರುವ ಎಲ್ಲಾ ಅಡ್ಡಿಯೂ ನಿವಾರಣೆಯಾಗಿದೆ. </p><p>ನೀರಿನ ಮಟ್ಟ ಕೆಳಗೆ ಇಳಿದಿರುವ ಕಾರಣ ನದಿಗೆ ನೀರು ಹರಿಸುವುದನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಇದೀಗ ಕಾಲುವೆಗಳಿಗೆ ಮಾತ್ರ ನೀರು ಹರಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>