<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ಗೂ ಅಧಿಕ ಒಳಹರಿವು ಇರುವ ಕಾರಣ ಹಾಗೂ ಜಲಾಶಯದಲ್ಲಿ ಈಗಾಗಲೇ 61.88 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿರುವುದರಿಂದ ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ನಿರೀಕ್ಷೆ ಇದೆ.</p><p>‘ಅಣೆಕಟ್ಟೆಯ ಕ್ರಸ್ಟ್ಗೇಟ್ಗಳನ್ನು ತೆರೆದು 25 ಸಾವಿರ ಕ್ಯೂಸೆಕ್ ತನಕ ನೀರು ಹೊರಬಿಡುವ ಸಾಧ್ಯತೆ ಇದೆ. ಹೀಗಾಗಿ ಅಣೆಕಟ್ಟೆಯ ಕೆಳಭಾಗದಲ್ಲಿ ಇರುವ ನದಿ ದಂಡೆಯ ಜನರು ಎಚ್ಚರದಿಂದ ಇರಬೇಕು’ ಎಂದು ತುಂಗಭದ್ರಾ ಮಂಡಳಿ ಶನಿವಾರ ಹೊರಡಿಸಿದ ತುರ್ತು ಪ್ರಕಟಣೆಯಲ್ಲಿ ತಿಳಿಸಿದೆ.</p><p>1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿ ಸದ್ಯ 1,620.20 ಅಡಿ ಮಟ್ಟದಲ್ಲಿ ನೀರು ಇದೆ. 105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯಕ್ಕೆ ಪ್ರತಿದಿನ 4 ಟಿಎಂಸಿ ಅಡಿಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಅಣೆಕಟ್ಟೆಯ ಕ್ರಸ್ಟ್ಗೇಟ್ಗಳು ದುರ್ಬಲವಾಗಿರುವ ಕಾರಣ ಈ ಮಳೆಗಾಲದಲ್ಲಿ ಗರಿಷ್ಠ 80 ಟಿಎಂಸಿ ಅಡಿಯಷ್ಟು ಮಾತ್ರ ನೀರು ಸಂಗ್ರಹಿಸಲು ನಿರ್ಧರಿಸಲಾಗಿದ್ದು, ಹೀಗಾಗಿ ಒಳಹರಿವು ಅಧಿಕ ಇರುವ ಕಾರಣ ಕ್ರಸ್ಟ್ಗೇಟ್ಗಳನ್ನು ತೆರೆದು ಈಗಿನಿಂದಲೇ ನೀರನ್ನು ನದಿಗೆ ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.</p><p>ಕಳೆದ ವರ್ಷ ಜುಲೈ ಮೂರನೇ ವಾರ ಅಣೆಕಟ್ಟು ಬಹುತೇಕ ಭರ್ತಿಯ ಹಂತಕ್ಕೆ ಬಂದ ಕಾರಣ ಕ್ರಸ್ಟ್ಗೇಟ್ಗಳನ್ನು ತೆರೆದು ನೀರನ್ನು ನದಿಗೆ ಹರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ಗೂ ಅಧಿಕ ಒಳಹರಿವು ಇರುವ ಕಾರಣ ಹಾಗೂ ಜಲಾಶಯದಲ್ಲಿ ಈಗಾಗಲೇ 61.88 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿರುವುದರಿಂದ ಅಣೆಕಟ್ಟೆಯ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ ನೀರನ್ನು ನದಿಗೆ ಹರಿಸುವ ನಿರೀಕ್ಷೆ ಇದೆ.</p><p>‘ಅಣೆಕಟ್ಟೆಯ ಕ್ರಸ್ಟ್ಗೇಟ್ಗಳನ್ನು ತೆರೆದು 25 ಸಾವಿರ ಕ್ಯೂಸೆಕ್ ತನಕ ನೀರು ಹೊರಬಿಡುವ ಸಾಧ್ಯತೆ ಇದೆ. ಹೀಗಾಗಿ ಅಣೆಕಟ್ಟೆಯ ಕೆಳಭಾಗದಲ್ಲಿ ಇರುವ ನದಿ ದಂಡೆಯ ಜನರು ಎಚ್ಚರದಿಂದ ಇರಬೇಕು’ ಎಂದು ತುಂಗಭದ್ರಾ ಮಂಡಳಿ ಶನಿವಾರ ಹೊರಡಿಸಿದ ತುರ್ತು ಪ್ರಕಟಣೆಯಲ್ಲಿ ತಿಳಿಸಿದೆ.</p><p>1,633 ಅಡಿ ಎತ್ತರದ ಅಣೆಕಟ್ಟೆಯಲ್ಲಿ ಸದ್ಯ 1,620.20 ಅಡಿ ಮಟ್ಟದಲ್ಲಿ ನೀರು ಇದೆ. 105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯಕ್ಕೆ ಪ್ರತಿದಿನ 4 ಟಿಎಂಸಿ ಅಡಿಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಅಣೆಕಟ್ಟೆಯ ಕ್ರಸ್ಟ್ಗೇಟ್ಗಳು ದುರ್ಬಲವಾಗಿರುವ ಕಾರಣ ಈ ಮಳೆಗಾಲದಲ್ಲಿ ಗರಿಷ್ಠ 80 ಟಿಎಂಸಿ ಅಡಿಯಷ್ಟು ಮಾತ್ರ ನೀರು ಸಂಗ್ರಹಿಸಲು ನಿರ್ಧರಿಸಲಾಗಿದ್ದು, ಹೀಗಾಗಿ ಒಳಹರಿವು ಅಧಿಕ ಇರುವ ಕಾರಣ ಕ್ರಸ್ಟ್ಗೇಟ್ಗಳನ್ನು ತೆರೆದು ಈಗಿನಿಂದಲೇ ನೀರನ್ನು ನದಿಗೆ ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.</p><p>ಕಳೆದ ವರ್ಷ ಜುಲೈ ಮೂರನೇ ವಾರ ಅಣೆಕಟ್ಟು ಬಹುತೇಕ ಭರ್ತಿಯ ಹಂತಕ್ಕೆ ಬಂದ ಕಾರಣ ಕ್ರಸ್ಟ್ಗೇಟ್ಗಳನ್ನು ತೆರೆದು ನೀರನ್ನು ನದಿಗೆ ಹರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>