<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ 78.23 ಟಿಎಂಸಿ ಅಡಿ ತಲುಪಿದ್ದು, ಗುರುವಾರ 20 ಕ್ರೆಸ್ಟ್ಗೇಟ್ಗಳನ್ನು ತೆರೆದು, 62,766 ಕ್ಯೂಸೆಕ್ನಷ್ಟು ನೀರನ್ನು ನದಿ ಮತ್ತು ಕಾಲುವೆಗಳಿಗೆ ಹರಿಸಲಾಯಿತು. ಇದರಿಂದ ಹಂಪಿಯಲ್ಲಿ ಪುರಂದರ ಮಂಟಪ ಬಹುತೇಕ ಮುಳುಗಡೆಯಾಗಿದೆ.</p>.ತುಂಗಭದ್ರಾ ಜಲಾಶಯ: ಒಳಹರಿವಿನ ಪ್ರಮಾಣದಲ್ಲಿ ಇಳಿಕೆ .<p>105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಈ ಬಾರಿ 80 ಟಿಎಂಸಿ ಅಡಿಯಷ್ಟು ನೀರನ್ನು ಮಾತ್ರ ಸಂಗ್ರಹಿಸಿ ಇಡಲು ತುಂಗಭದ್ರಾ ಮಂಡಳಿ ನಿರ್ಧರಿಸಿದೆ. ಇನ್ನಷ್ಟು ಕ್ರೆಸ್ಟ್ಗೇಟ್ಗಳನ್ನು ತೆರೆದು ನೀರು ಹೊರಬಿಡುವ ಸಾಧ್ಯತೆ ಇದೆ. ನದಿ ದಂಡೆಯ ಜನರು ಎಚ್ಚರದಿಂದ ಇರಬೇಕು ಎಂದು ಮಂಡಳಿ ಎಚ್ಚರಿಕೆ ನೀಡಿದೆ.</p><p>ಕಳೆದ ವರ್ಷ ಜುಲೈ 3ನೇ ವಾರ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಆಗ ಕ್ರೆಸ್ಟ್ಗೇಟ್ಗಳನ್ನು ಹಂತ ಹಂತವಾಗಿ ತೆರೆದು ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗಿತ್ತು. ಆದರೆ, ಕ್ರಸ್ಟ್ಗೇಟ್ಗಳು ಶಿಥಿಲಗೊಂಡಿವೆ. ಅವುಗಳನ್ನು ಬದಲಿಸುವಂತೆ ತಜ್ಞರು ವರದಿ ನೀಡಿದ ಕಾರಣ ಈ ಬಾರಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸದಿರಲು ನಿರ್ಧರಿಸಲಾಗಿದೆ. ಹೀಗಾಗಿ 20 ಕ್ರೆಸ್ಟ್ಗೇಟ್ಗಳನ್ನು ತಲಾ 2.5 ಅಡಿಯಷ್ಟು ಎತ್ತಿ ನೀರು ಹೊರಬಿಡಲಾಗುತ್ತಿದೆ.</p> .ತುಂಗಭದ್ರಾ ಜಲಾಶಯ | ಎರಡನೇ ಬೆಳೆಗೂ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ 78.23 ಟಿಎಂಸಿ ಅಡಿ ತಲುಪಿದ್ದು, ಗುರುವಾರ 20 ಕ್ರೆಸ್ಟ್ಗೇಟ್ಗಳನ್ನು ತೆರೆದು, 62,766 ಕ್ಯೂಸೆಕ್ನಷ್ಟು ನೀರನ್ನು ನದಿ ಮತ್ತು ಕಾಲುವೆಗಳಿಗೆ ಹರಿಸಲಾಯಿತು. ಇದರಿಂದ ಹಂಪಿಯಲ್ಲಿ ಪುರಂದರ ಮಂಟಪ ಬಹುತೇಕ ಮುಳುಗಡೆಯಾಗಿದೆ.</p>.ತುಂಗಭದ್ರಾ ಜಲಾಶಯ: ಒಳಹರಿವಿನ ಪ್ರಮಾಣದಲ್ಲಿ ಇಳಿಕೆ .<p>105.78 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲಿ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಈ ಬಾರಿ 80 ಟಿಎಂಸಿ ಅಡಿಯಷ್ಟು ನೀರನ್ನು ಮಾತ್ರ ಸಂಗ್ರಹಿಸಿ ಇಡಲು ತುಂಗಭದ್ರಾ ಮಂಡಳಿ ನಿರ್ಧರಿಸಿದೆ. ಇನ್ನಷ್ಟು ಕ್ರೆಸ್ಟ್ಗೇಟ್ಗಳನ್ನು ತೆರೆದು ನೀರು ಹೊರಬಿಡುವ ಸಾಧ್ಯತೆ ಇದೆ. ನದಿ ದಂಡೆಯ ಜನರು ಎಚ್ಚರದಿಂದ ಇರಬೇಕು ಎಂದು ಮಂಡಳಿ ಎಚ್ಚರಿಕೆ ನೀಡಿದೆ.</p><p>ಕಳೆದ ವರ್ಷ ಜುಲೈ 3ನೇ ವಾರ ಜಲಾಶಯ ಬಹುತೇಕ ಭರ್ತಿಯಾಗಿತ್ತು. ಆಗ ಕ್ರೆಸ್ಟ್ಗೇಟ್ಗಳನ್ನು ಹಂತ ಹಂತವಾಗಿ ತೆರೆದು ಹೆಚ್ಚುವರಿ ನೀರನ್ನು ಹೊರಗೆ ಬಿಡಲಾಗಿತ್ತು. ಆದರೆ, ಕ್ರಸ್ಟ್ಗೇಟ್ಗಳು ಶಿಥಿಲಗೊಂಡಿವೆ. ಅವುಗಳನ್ನು ಬದಲಿಸುವಂತೆ ತಜ್ಞರು ವರದಿ ನೀಡಿದ ಕಾರಣ ಈ ಬಾರಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸದಿರಲು ನಿರ್ಧರಿಸಲಾಗಿದೆ. ಹೀಗಾಗಿ 20 ಕ್ರೆಸ್ಟ್ಗೇಟ್ಗಳನ್ನು ತಲಾ 2.5 ಅಡಿಯಷ್ಟು ಎತ್ತಿ ನೀರು ಹೊರಬಿಡಲಾಗುತ್ತಿದೆ.</p> .ತುಂಗಭದ್ರಾ ಜಲಾಶಯ | ಎರಡನೇ ಬೆಳೆಗೂ ನೀರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>