<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಹೊಸಪೇಟೆ ತಾಲ್ಲೂಕು ಮರಿಯಮ್ಮನಹಳ್ಳಿ ಸಮೀಪದ ಎಂಎಸ್ಪಿಎಲ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರ ಮೇಲ್ಸುತುವೆ ಬದಿಯ ತುಂಗಭದ್ರಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಸೋಮವಾರ ಸಂಜೆ ಇಬ್ಬರು ಸಹೋದರರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p><p>ಪಟ್ಟಣ ಸಮೀಪದ ಹಂಪಿನಕಟ್ಟೆ ಗ್ರಾಮದ ಕೂಲಿಕಾರ್ಮಿಕ ರಾಜಾಭಕ್ಷಿ (30) ಮತ್ತು ಅವರ ತಮ್ಮ ಬೀದರ್ ಜಿಲ್ಲೆ ಹುಮನಬಾದ್ನಲ್ಲಿ ಗ್ರಾಮ ಲೆಕ್ಕಿಗನಾಗಿ ಕೆಲಸ ಮಾಡುತ್ತಿದ್ದ ಬಾರಿ ಇಮಾಂ(26) ಮೃತಪಟ್ಟವರು.</p><p>ಇವರಿಬ್ಬರೂ ಅವಿವಾಹಿತರಾಗಿದ್ದರು. ಭಾನುವಾರ ಮನೆಯಲ್ಲಿ ಗ್ಯಾರ್ವಿ ಹಬ್ಬ ಆಚರಿಸಿಕೊಂಡಿದ್ದರು. ಸೋಮವಾರ ಕುಟುಂಬದ ಇತರೆ ಏಳು ಜನ ಸದಸ್ಯರೊಂದಿಗೆ ಸಮೀಪದ ಎಂಎಸ್ಪಿಎಲ್ ಕ್ರಾಸ್ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರ ಪ್ರದೇಶಕ್ಕೆ ಸಂಜೆ ವನಭೋಜನಕ್ಕೆ ತೆರಳಿದ್ದರು.</p><p>ಈಜು ಬಾರದ ಇವರಿಬ್ಬರು ನದಿಗೆ ಇಳಿದಿದ್ದಾಗ ಕಾಲು ಜಾರಿ ಬಿದ್ದು ಮುಳುಗಿದ್ದಾರೆ. ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಯ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಭೇಟಿ ನೀಡಿ ಪರಿಶೀಲಿಸಿದರು. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಹೊಸಪೇಟೆ ತಾಲ್ಲೂಕು ಮರಿಯಮ್ಮನಹಳ್ಳಿ ಸಮೀಪದ ಎಂಎಸ್ಪಿಎಲ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-50ರ ಮೇಲ್ಸುತುವೆ ಬದಿಯ ತುಂಗಭದ್ರಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಸೋಮವಾರ ಸಂಜೆ ಇಬ್ಬರು ಸಹೋದರರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p><p>ಪಟ್ಟಣ ಸಮೀಪದ ಹಂಪಿನಕಟ್ಟೆ ಗ್ರಾಮದ ಕೂಲಿಕಾರ್ಮಿಕ ರಾಜಾಭಕ್ಷಿ (30) ಮತ್ತು ಅವರ ತಮ್ಮ ಬೀದರ್ ಜಿಲ್ಲೆ ಹುಮನಬಾದ್ನಲ್ಲಿ ಗ್ರಾಮ ಲೆಕ್ಕಿಗನಾಗಿ ಕೆಲಸ ಮಾಡುತ್ತಿದ್ದ ಬಾರಿ ಇಮಾಂ(26) ಮೃತಪಟ್ಟವರು.</p><p>ಇವರಿಬ್ಬರೂ ಅವಿವಾಹಿತರಾಗಿದ್ದರು. ಭಾನುವಾರ ಮನೆಯಲ್ಲಿ ಗ್ಯಾರ್ವಿ ಹಬ್ಬ ಆಚರಿಸಿಕೊಂಡಿದ್ದರು. ಸೋಮವಾರ ಕುಟುಂಬದ ಇತರೆ ಏಳು ಜನ ಸದಸ್ಯರೊಂದಿಗೆ ಸಮೀಪದ ಎಂಎಸ್ಪಿಎಲ್ ಕ್ರಾಸ್ ಬಳಿಯ ತುಂಗಭದ್ರಾ ಜಲಾಶಯದ ಹಿನ್ನೀರ ಪ್ರದೇಶಕ್ಕೆ ಸಂಜೆ ವನಭೋಜನಕ್ಕೆ ತೆರಳಿದ್ದರು.</p><p>ಈಜು ಬಾರದ ಇವರಿಬ್ಬರು ನದಿಗೆ ಇಳಿದಿದ್ದಾಗ ಕಾಲು ಜಾರಿ ಬಿದ್ದು ಮುಳುಗಿದ್ದಾರೆ. ನಂತರ ಅಗ್ನಿ ಶಾಮಕ ಮತ್ತು ತುರ್ತು ಸೇವೆಯ ಸಿಬ್ಬಂದಿ ಬಂದು ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.</p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಭೇಟಿ ನೀಡಿ ಪರಿಶೀಲಿಸಿದರು. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>