ಇತ್ತೀಚೆಗೆ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ಕರಡಿ ಪ್ರತ್ಯಕ್ಷವಾಗಿತ್ತು, ಭೀಮಸಮುದ್ರ, ಕಡಕೋಳ, ಮಡ್ಲಾನಾಯಕನಹಳ್ಳಿ ಬಳಿ ರೈತರು ಕರಡಿ ಓಡಿಸುವ ವಿಡಿಯೋ ವೈರಲ್ ಆಗಿತ್ತು. ಬೇಸಿಗೆ ಇರುವುದರಿಂದ ಕರಡಿಗಳು ಆಹಾರ, ನೀರು ಅರಸಿಕೊಂಡು ಕಾಡಂಚಿನ ಗ್ರಾಮಗಳಿಗೆ ಬರುತ್ತಿವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕರಡಿಗಳ ಓಡಾಟ ಹೆಚ್ಚಾಗಿರುವುದರಿಂದ ರೈತರು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.