ಹೊಸದಾಗಿ ವಿದ್ಯುತ್ ಸಂಪರ್ಕ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಸಿರಿಗೇರಿಯ ಧಾತ್ರಿ ರಂಗಸಂಸ್ಥೆ ಕಲಾವಿದರು 'ವಿದ್ಯುತ್; ಹುಟ್ಟು ಬೆಳವಣಿಗೆ' ಕಿರುನಾಟಕ ಪ್ರದರ್ಶಿಸಿದರು. ನಗರಸಭೆ ಅಧ್ಯಕ್ಷೆ ಸುಂಕಮ್ಮ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀನಿವಾಸ ಜಿ.ಜೆ, ಜೆಸ್ಕಾಂ ವೃತ್ತದ ಸೂಪರಿಟೆಂಡೆಂಟ್ ಎಂಜಿನಿಯರ್ ವೆಂಕಟೇಶಲು ಇದ್ದರು.